19.1 C
Sidlaghatta
Sunday, February 22, 2026

ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಿ

- Advertisement -
- Advertisement -

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಕ್ರೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮೊಹಮ್ಮದ್ ತಮೀಮ್ ಅನ್ಸಾರಿ ತಮ್ಮ ತಾಯಿಯ ಜ್ಞಾಪಕಾರ್ಥವಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪ್ಯಾಡ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪರೀಕ್ಷೆಯ ಭಯವನ್ನು ಮನಸ್ಸಿನಿಂದ ಅಳಿಸಿಹಾಕಿ. ಅಂಜಿಕೆ ಬಿಟ್ಟು ಆತ್ಮವಿಶ್ವಾಸದಿಂದ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯನ್ನು ಎದುರಿಸುವ ಪ್ರವೃತ್ತಿ ಬೆಳೆಸಿಕೊಂಡಾಗ ಮಾತ್ರ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ. ವೃಥಾ ಕಾಲವನ್ನು ವ್ಯಯಿಸದೇ ಗಮನವಿಟ್ಟು ಓದಿ, ಮನನ ಮಾಡಿಕೊಳ್ಳಿ. ಶಾಲೆ ಹಾಗೂ ತಾಲ್ಲೂಕಿಗೆ ಕೀರ್ತಿಯನ್ನು ತನ್ನಿ ಎಂದು ಹುರಿದುಂಬಿಸಿದರು.
ಪರೀಕ್ಷೆಯ ಸಮಯದಲ್ಲಿ ಭಯದಿಂದ ನಿದ್ದೆಗೆಟ್ಟು ಊಟವನ್ನು ಬಿಟ್ಟು ಆರೋಗ್ಯವನ್ನು ಹಾಳುಮಾಡಿಕೊಳ್ಳುವ ಬಗ್ಗೆ ಮಕ್ಕಳು ಎಚ್ಚರವಹಿಸಬೇಕು, ಪರೀಕ್ಷಾ ಸಮಯದಲ್ಲಿ ಆತಂಕ ಹಾಗೂ ಭಯದಿಂದ ಆನಾ ರೋಗ್ಯಕ್ಕೆ ತುತ್ತಾಗಿ ವರ್ಷವಿಡಿ ಶ್ರಮಪಟ್ಟು ಕಲಿತ ವಿದ್ಯೆಯನ್ನು ಹಾಳುಮಾಡಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ಕ್ರೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮೊಹಮ್ಮದ್ ತಮೀಮ್ ಅನ್ಸಾರಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!