Home News ಪಲ್ಸ್ ಪೋಲಿಯೋ ಜಾಗೃತಿ ಜಾಥಾ

ಪಲ್ಸ್ ಪೋಲಿಯೋ ಜಾಗೃತಿ ಜಾಥಾ

0

ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆ ಉಂಟು ಮಾಡಿ, ದೀರ್ಘಕಾಲ ಭೀಕರ ಪರಿಣಾಮ ಬೀರುವ ಪೋಲಿಯೋ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ದೇಶವನ್ನು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಇಂತಹ ಕಾರ್ಯಕ್ರಮ ನಡೆಸುವುದು ನಮ್ಮ ಆದ್ಯ ಕರ್ತವ್ಯ ಎಂದು -ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ತಿಳಿಸಿದರು.
ನಗರದಲ್ಲಿ ಶನಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪೋಲಿಯೊ ರೋಗವು ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. ಇದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಬೇಕು. ಪ್ರಥಮ ಹಂತದಲ್ಲಿ ಜನವರಿ ೧೭ ರಿಂದ ೨೦ ತನಕ ನಡೆಯುವ ಪಲ್ಸ್ಪೋಲಿಯೋ ಲಸಿಕೆ ಹಾಕಿಸಲಾಗುತ್ತಿದ್ದು ಶಿಡ್ಲಘಟ್ಟ ನಗರದ ೭,೦೯೫ ಮಕ್ಕಳು ಸೇರಿದಂತೆ ತಾಲ್ಲೂಕಿನಾದ್ಯಂತ ೨೭,೩೨೪ ಮಕ್ಕಳಿಗೆ ಲಸಿಕೆ ಹಾಕಿಸಲು ಗುರಿ ಹೊಂದಲಾಗಿದ್ದು ಅದಕ್ಕಾಗಿ ತಾಲ್ಲೂಕಿನಾದ್ಯಂತ ೧೦೫ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಸರಸ್ವತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಪೋಲಿಯೋ ಲಸಿಕೆ ಹಾಕಿಸುವಂತೆ ಘೋಷಣೆಗಳನ್ನು ಕೂಗುತ್ತಾ ಜನ ಜಾಗೃತಿ ನಡೆಸಿದರು.