Home News ಪಿ ಯು ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಪಿ ಯು ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

0

ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜನಾರ್ಧನ್‌ ಮಾತನಾಡಿದರು.
ಕ್ರೀಡೆಗಳಿಂದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯ ವಿಕಾಸವಾಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಓದಿನ ಜೊತೆಗೆ ಕ್ರಿಯಾಶೀಲ ಚಟುವಟಿಕೆಯಿದ್ದರೆ ವಿದ್ಯಾರ್ಥಿಗಳ ಉತ್ಸಾಹ ಇಮ್ಮಡಿಗೊಳ್ಳುತ್ತದೆ. ವಿದ್ಯಾರ್ಥಿ ದಿಸೆಯಿಂದಲೇ ಕ್ರೀಡೆಯಲ್ಲಿ ಶ್ರದ್ಧೆ ಮತ್ತು ಬದ್ಧತೆಯಿಂದ ಪಾಲ್ಗೊಳ್ಳಬೇಕು. ಛಲ, ಆತ್ಮವಿಶ್ವಾಸದಿಂದ ಸಾಧನೆ ಮಾಡಿ ಎಂದು ಹೇಳಿದರು.
ವಿದ್ಯಾದ್ರಿ ಕಾಲೇಜಿನ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ತಾಲ್ಲೂಕುಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಕ್ರೀಡೆಯಲ್ಲಿನ ಪ್ರತಿಭಾವಂತರಿಗೆ ಇದು ಒಳ್ಳೆಯ ಅವಕಾಶ ಎಂದರು.
ವಿದ್ಯಾದ್ರಿ ಕಾಲೇಜಿನ ಪ್ರಾಂಶುಪಾಲ ನಾಗರಾಜ್‌, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆನಂದ್‌, ಗೈಹಿಕ ಶಿಕ್ಷಕ ಎಚ್‌.ಎಂ.ರಂಗನಾಥ್‌, ಮುಖ್ಯಶಿಕ್ಷಕಿ ಕೆ.ಎಸ್‌.ಮಂಜುಳಾ ಹಾಜರಿದ್ದರು.

error: Content is protected !!