ಪುರಾತನ ಬೂದಾಳದ ದೇಗುಲದ ಜೀರ್ಣೋದ್ಧಾರ

- Advertisement -
- Advertisement -

ಸುಮಾರು ೮೫೭ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಬೂದಾಳ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಜೀಣೋದ್ಧಾರ ಕಾರ್ಯಕ್ರಮ ವಿಜೃಂಭಣೆಯಿಂದ ಮಂಗಳವಾರ ನೆರವೇರಿತು.
ತಾಲ್ಲೂಕಿನ ಚಿಂತಾಮಣಿ ರಸ್ತೆಯಲ್ಲಿರುವ ಬೂದಾಳ ಗ್ರಾಮದ ಆಂಜನೇಯಸ್ವಾಮಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದ ದೇವಾಲಯವಾಗಿದ್ದರೂ ಕೂಡಾ ಇದುವರೆಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಗಮನಹರಿಸದೇ ಇದ್ದುದ್ದರಿಂದ ದೇವಾಲಯ ಪಾಳುಬಿದ್ದಿತ್ತು, ಇದನ್ನು ಗಮನಿಸಿದ ಬೂದಾಳ ಹಾಗೂ ವೀರಾಪುರ ಗ್ರಾಮಸ್ಥರು, ದೇವಾಲಯವನ್ನು ಜೀಣೋದ್ದಾರಗೊಳಿಸಿ, ಪುನರ್ ಪ್ರತಿಷ್ಟಾಪನೆ ಮಾಡಿ, ಪೂಜಾ ಕೈಂಕರ್ಯಗಳನ್ನು ನಡೆಸಲಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇತಿಹಾಸ ಪ್ರಸಿದ್ದ ದೇವಾಲಯವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಗ್ರಾಮದ ಮುಖಂಡ ಕೃಷ್ಣಪ್ಪ ತಿಳಿಸಿದರು.
ಕಳೆದ ಮೂರು ದಿನಗಳಿಂದ ನಡೆದಂತಹ ವಿಶೇಷ ಪೂಜೆ, ಹೋಮಗಳ ಮೂಲಕ ದೇವಾಲಯದ ಪ್ರತಿಷ್ಟಾಪನೆ ಮಾಡಲಾಗಿದ್ದು, ದೇವಾಲಯಕ್ಕೆ ಬಂದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆಯನ್ನು ಮಾಡಲಾಗಿತ್ತು.
ದೇವಾಲಯಕ್ಕೆ ಶಾಸಕ ಎಂ.ರಾಜಣ್ಣ, ಜಿಲ್ಲಾ ಪಂಚಾಯತಿ ಸದಸ್ಯ ಬಂಕ್‌ ಮುನಿಯಪ್ಪ, ತಹಶೀಲ್ದಾರ್ ಕೆ.ಎಂ. ಮನೋರಮಾ, ಸೇರಿದಂತೆ ಇತರೆ ಗಣ್ಯರು ಬೇಟಿ ನೀಡಿ ದೇವರ ದರ್ಶನ ಪಡೆದರು. ಗ್ರಾಮಸ್ಥರಾದ ಕೃಷ್ಣಪ್ಪ, ಮುನಿರೆಡ್ಡಿ, ಗಣೇಶ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!