ಪೂಜಮ್ಮದೇವಿ ಹೂವಿನ ಕರಗ

- Advertisement -
- Advertisement -

ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಪೂಜಮ್ಮದೇವಿ ಹೂವಿನ ಕರಗ ಮಹೋತ್ಸವ ಭಾನುವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಕರಗದ ಪ್ರಯುಕ್ತ ಎರಡು ಕಡೆ ವಿಶೇಷ ವಾದ್ಯಗೋಷ್ಠಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ದೀಪಾಲಂಕಾರಗಳ ಪೂಜಮ್ಮ ದೇವಿಯ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಿತು.
ಕದಿರಿಹುಣ್ಣಿಯಂದು ಪ್ರತಿವರ್ಷವೂ ನಗರದ ಪೂಜಮ್ಮ ದೇವಿಯ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಕರಗವನ್ನು ನಡೆಸಲಾಗುತ್ತದೆ.
ಕರಗದ ನೃತ್ಯ ಮತ್ತು ಆಕರ್ಷಕ ತಮಟೆ ವಾದ್ಯ ಗಮನ ಸೆಳೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಕರಗಹೊತ್ತವರು ವಾದ್ಯವೃಂದದೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಮನೆಗಳ ಮುಂದೆ ರಂಗೋಲಿ ಹಾಕಿ, ಕರಗ ಬಂದಾಗ ಪೂಜೆ ಸಲ್ಲಿಸಿ, ಮಲ್ಲಿಗೆ ಹೂಗಳನ್ನು ಅರ್ಪಿಸಿದರು. ಕೋಟೆ ವೃತ್ತ ಹಾಗೂ ಓ.ಟಿ ವೃತ್ತದ ಬಳಿ ವಾದ್ಯಗೋಷ್ಠಿಗಳನ್ನು ಏರ್ಪಡಿಸಲಾಗಿತ್ತು.
ಶಾಸಕ ಎಂ.ರಾಜಣ್ಣ, ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ನಗರಸಭಾ ಸದಸ್ಯರಾದ ಲಕ್ಷ್ಮಯ್ಯ, ಎಸ್.ರಾಘವೇಂದ್ರ, ರಮೇಶ್, ಶ್ರೀನಾಥ, ಶ್ರೀಧರ್, ಡಾ.ಸತ್ಯನಾರಾಯಣರಾವ್, ಮುನಿನರಸಿಂಹ, ನಾಗನರಸಿಂಹ, ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!