Home News ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ

ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ

0

ತಾಲ್ಲೂಕಿನಾದ್ಯಂತ ಇರುವ ಗ್ರಾಮೀಣ ಪ್ರದೇಶ ಮತ್ತು ನಗರದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡಲು ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಹೇಳಿದರು.
ನಗರದ ಗ್ರಾಮಾಂತರ ಪೋಲೀಸ್ ಠಾಣೆ ಆವರಣದಲ್ಲಿ ಪೋಲೀಸ್ ಇಲಾಖೆಯಿಂದ ಶನಿವಾರ ಆಯೋಜಿಸಲಾಗಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮರಳು ಮಾಫಿಯಾ ಬಗ್ಗೆ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಯಾವುದೇ ಮರಳು ದಂಧೆ ನಡೆಯದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು. ದಲಿತರ ವ್ಯಾಜ್ಯಗಳನ್ನು ಬಗೆಹರಿಸಿ ಮತ್ತು ಅವರಿಗೆ ಸೂಕ್ತ ರಕ್ಷಣೆ ನೀಡುವ ಕೆಲಸವನ್ನು ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಲಿದ್ದಾರೆ ಎಂದರು.
ಯಾರದೋ ಒತ್ತಡಗಳಿಗೆ ಮಣಿದು ಸುಳ್ಳು ದೂರು ನೀಡುವವರ ಮೇಲೆ ನಿಗಾವಹಿಸಲಾಗುವುದು ಹಾಗು ಅಕ್ರಮ ಮಧ್ಯಮಾರಾಟದ ಬಗ್ಗೆ ನಾವು ತೆಗೆದುಕೊಳ್ಳುವ ಕಠಿಣವಾದ ತೀರ್ಮಾನಗಳಿಗೆ ನಾಗರಿಕರೂ ಸೇರಿದಂತೆ ಜನಪ್ರತಿನಿಧಿಗಳು ಸಹಕರಿಸಬೇಕು ಎಂದರು.
ಸರ್ಕಲ್ ಇನ್ಸ್ಪೆಕ್ಟರ್ ವೆಂಕಟೇಶ್, ನಗರ ಠಾಣೆ ಪಿಎಸ್ಸೈ ನವೀನ್, ದಿಬ್ಬೂರಹಳ್ಳಿ ಠಾಣೆ ಪಿಎಸ್ಸೈ ವಿಜಯ್ರೆಡ್ಡಿ, ಗ್ರಾಮಾಂತರ ಠಾಣೆ ಪಿಎಸ್ಸೈ ಪ್ರದೀಪ್ ಪೂಜಾರಿ, ವಿವಿಧ ದಲಿತ ಮುಖಂಡರು ಸಭೆಯಲ್ಲಿ ಹಾಜರಿದ್ದರು.

error: Content is protected !!
Exit mobile version