Home News ಪ್ರತಿಯೊಂದು ಸಂಘಗಳೂ ಸಮಾಜದ ಒಳಿತಿಗೋಸ್ಕರ ಕೆಲಸ ಮಾಡಬೇಕು

ಪ್ರತಿಯೊಂದು ಸಂಘಗಳೂ ಸಮಾಜದ ಒಳಿತಿಗೋಸ್ಕರ ಕೆಲಸ ಮಾಡಬೇಕು

0

ಮಾನವ ಸಂಘಜೀವಿಯಾಗಿದ್ದು ಸಾಂಘಿಕ ಜೀವನವು ಸಮಾಜದ ಅಭಿವೃದ್ಧಿಗೆ ಪೂರಕವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈಚೆಗೆ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ನೂತನ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಂದು ಸಂಘಗಳೂ ಸಮಾಜದ ಒಳಿತಿಗೋಸ್ಕರ ಕೆಲಸ ಮಾಡಬೇಕು ಎಂದ ಅವರು ಶಿಕ್ಷಕರ ಸಂಘಗಳ ಕಾರ್ಯಕ್ರಮಗಳಡಿಯಲ್ಲಿ ಗುಣಾತ್ಮಕ ಶಿಕ್ಷಣದ ಅನುಷ್ಟಾನ, ಉತ್ತಮ ಫಲಿತಾಂಶ ಪಡೆಯಲು ಮತ್ತು ಮಕ್ಕಳಲ್ಲಿ ಬದುಕಿನ, ನೈತಿಕ ಮೌಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಒಗ್ಗಟ್ಟಿನಿಂದ ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಪ್ರಯತ್ನಿಸಬೇಕು ಎಂದು ಅವರು ತಿಳಿಸಿದರು.
ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ ಅವರು ಮಾತನಾಡಿ, ಸರ್ಕಾರವು ಪ್ರೌಢಶಾಲಾ ವೃಂದದ ಟಿಜಿಟಿ, ಬಿಆರ್‍ಪಿ, ಇಸಿಒ ಮತ್ತು ಕ್ಷೇತ್ರಸಮನ್ವಯಾಧಿಕಾರಿಗಳಿಗೆ ನೀಡಬೇಕಾದ ಹೆಚ್ಚುವರಿ ಭತ್ಯೆಯಲ್ಲಿ ತಾರತಮ್ಯ ಮಾಡಿದ್ದು ಶೀಘ್ರ ಬಗೆಹರಿಯುವ ವಿಶ್ವಾಸವಿದೆ. ಕಚೇರಿಗಳಲ್ಲಿ ಶಿಕ್ಷಕರ ವೇತನ, ಮತ್ತಿತರ ಸಮಸ್ಯೆಗಳನ್ನು ಸಂಘವು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತದೆ ಎಂದರು.
ಶಿಕ್ಷಣ ಸಂಯೋಜಕ ಲಕ್ಷ್ಮಿನಾರಾಯಣಗೌಡ, ಜಿಲ್ಲಾ ಸಂಘದ ಉಪಾಧ್ಯಕ್ಷ ಎಂ.ಕೆಂಪೇಗೌಡ, ತಾಲ್ಲೂಕು ಕಾರ್ಯದರ್ಶಿ ಎಲ್.ವಿ.ವೆಂಕಟರೆಡ್ಡಿ, ಖಜಾಂಚಿ ಇಂದಿರಾ, ಸಹಕಾರ್ಯದರ್ಶಿ ಗೋವಿಂದರಾಜು, ಎಚ್.ಎಸ್.ರುದ್ರೇಶಮೂರ್ತಿ, ಎಂ.ಕೆ.ಸಿದ್ಧರಾಜು, ಮಾಲತಿ, ಪ್ರಶಾಂತ್, ಸಂಘಟನಾ ಕಾರ್ಯದರ್ಶಿ ಮನ್ಸೂರ್‍ಪಾಷ, ಮತ್ತಿತರರು ಉಪಸ್ಥಿತರಿದ್ದರು.

error: Content is protected !!