26.6 C
Sidlaghatta
Sunday, July 6, 2025

ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು

- Advertisement -
- Advertisement -

ದೇಶದ ಪ್ರತಿಯೊಂದು ಮಗುವಿಗೂ ಉತ್ತಮವಾದ ಶಿಕ್ಷಣ ಸಿಕ್ಕಿದಾಗ ಮಾತ್ರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದ ಹೋರಾಟಕ್ಕೆ ಅರ್ಥ ಬರುತ್ತದೆ ಎಂದು ಉಪನ್ಯಾಸಕ ಕೆ.ಮೂರ್ತಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಮತ್ತು ವಿವಿಧ ದಲಿತಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೫ ನೇ ವರ್ಷದ ಜನ್ಮದಿನಾಚರಣೆ ಹಾಗೂ ಡಾ. ಬಾಬುಜಗಜೀವನರಾಂ ಅವರ ೧೦೯ ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮದ ಮುಖ್ಯಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ಈ ದೇಶದ ಶೋಷಿತ ವರ್ಗದ ಮೇಲೆ ನಡೆಯುತ್ತಿದ್ದ ದೌರ್ಜನ್ಯ ದಬ್ಬಾಳಿಕೆಗಳು, ಶೋಷಣೆಯಿಂದಾಗಿ ನಿರಂತರವಾದ ಚಿಂತನೆಗಳನ್ನು ನಡೆಸಿದ ಡಾ.ಅಂಬೇಡ್ಕರ್ ಅವರು ದೇಶದ ಸಮಸ್ತ ಜನರಿಗೂ ನಿಜವಾದ ಸ್ವಾತಂತ್ರ್ಯ ಮತ್ತು ಉತ್ತಮ ಶಿಕ್ಷಣವನ್ನು ಕೊಡಿಸುವುದನ್ನು ಗುರಿಯನ್ನಾಗಿಸಿಕೊಂಡು ಸಂವಿಧಾನ ರಚಿಸಿದರು. ಆದರೆ ಅವರು ರಚಿಸಿದ ಸಂವಿಧಾನ ಹಾಗು ಮೀಸಲಾತಿಯ ಲಾಭ ಪಡೆದುಕೊಂಡು ಬೆಳೆದ ಜನರಿಂದಲೇ ವರ ಆಶಯಗಳಿಗೆ ಧಕ್ಕೆಯಾಗುತ್ತಿದೆ ಎಂದು ವಿಷಾಧಿಸಿದರು.
ಜೀವನವಿಡೀ ದಲಿತರ ಏಳಿಗೆಗಾಗಿ ಶ್ರಮಿಸಿದ ಅವರ ಕನಸನ್ನು ನನಸು ಮಾಡುವಂತಹ ಮಹತ್ತರವಾದ ಜವಾಬ್ದಾರಿ ಇಂದಿನ ಸಂಘಟನೆಗಳ ಮೇಲೆ ನಿಂತಿದೆ ಎಂದ ಅವರು ಅಂಬೇಡ್ಕರ್ ಕೇವಲ ದಲಿತರ ನಾಯಕರಲ್ಲ ಬದಲಿಗೆ ಅವರು ರಾಷ್ಟ್ರನಾಯಕರು, ವಿಶ್ವನಾಯಕರಾಗಿದ್ದಾರೆ ಎಂದರು.
ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರ ಏಳಿಗೆಯಾಗಬೇಕಾದರೆ ರಾಜಕೀಯ ರಂಗದಲ್ಲಿರುವ ಹಾಗೂ ರಾಜಕೀಯ ಮಾಡಲು ಇಚ್ಚಿಸುವ ಜನಪ್ರತಿನಿಧಿಗಳು ಮೊದಲು ಇತಿಹಾಸ ಓದಬೇಕು ಮತ್ತು ಸಂವಿಧಾನದಲ್ಲಿರುವ ಎಲ್ಲಾ ಅಂಶಗಳನ್ನು ಜಾರಿಗೊಳಿಸಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ರಾಜಣ್ಣ ಮಾತನಾಡಿ ಪ್ರತಿಯೊಬ್ಬರೂ ಅಂಬೇಡ್ಕರರ ಜೀವನದ ಉದ್ದೇಶಗಳನ್ನು ಅರ್ಥಮಾಡಿಕೊಂಡು ಅವರ ಆದರ್ಶಗಳನ್ನು ಪಾಲನೆ ಮಾಡಿಕೊಂಡು ಹೋಗಬೇಕು, ಅವರ ಹೋರಾಟದ ಹಾದಿಗಳನ್ನು ನೆನಪುಮಾಡಿಕೊಂಡು ಆದರ್ಶ ಜೀವನ ನಡೆಸುವಂತವರಾಗಬೇಕು ಎಂದರು.
ಸಂಘಟನೆಗಳು ಒಗ್ಗೂಡುವುದರೊಂದಿಗೆ ಸಮಾಜದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಟಗಳನ್ನು ಮಾಡಬೇಕು. ದೀನದಲಿತರ ಉದ್ದಾರಕ್ಕಾಗಿ ಚಿಂತನೆ ನಡೆಸುವುದರೊಂದಿಗೆ ಸಮಾಜದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು ಎಂದರು.
ಬೇರೆ ಬೇರೆ ದೇಶಗಳಿಂದ ಆಹಾರ ಧಾನ್ಯಗಳನ್ನು ರಪ್ತು ಮಾಡಿಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ದೇಶದಲ್ಲಿ ಹಸಿರು ಕ್ರಾಂತಿಯನ್ನುಹುಟ್ಟುಹಾಕಿದ ಮಾಜಿ ಉಪಪ್ರದಾನಿ ಡಾ.ಬಾಬುಜಗಜೀವನರಾಂ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ಇಂದು ನೆಮ್ಮದಿಯಿಂದ ಊಟ ಮಾಡುವಂತಾಗಿದೆ ಎಂದರು.

ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನರಾಂ ರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಮುಖಂಡರನ್ನು ಸನ್ಮಾನಿಸಲಾಯಿತು.
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನರಾಂ ರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಮುಖಂಡರನ್ನು ಸನ್ಮಾನಿಸಲಾಯಿತು.
ಇದೇ ಸಂಧರ್ಭದಲ್ಲಿ ತೋಟಗಾರಿಕಾ ಇಲಾಖೆ ಮತ್ತು ರೇಷ್ಮೆ ಇಲಾಖೆಯಿಂದ ನೀಡುವಂತಹ ವಿವಿಧ ಸೌಲಭ್ಯಗಳನ್ನು ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಮುಖಂಡರಾದ ಚಿಕ್ಕಮುನಿಯಪ್ಪ ಹಾಗೂ ಗಂಜಿಗುಂಟೆ ನರಸಿಂಹಮೂರ್ತಿರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ಮುನಿಯಪ್ಪ, ತನುಜಾರಘು, ತಹಸೀಲ್ದಾರ್ ಕೆ.ಎಂ.ಮನೋರಮಾ, ಕ್ಷೇತ್ರ ಶೀಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಕೆ.ಕಿಶನ್(ನಂದು), ನಗರಸಭೆ ಸದಸ್ಯರಾದ ಅಪ್ಸರ್ಪಾಷ, ಲಕ್ಷ್ಮಯ್ಯ, ವೆಂಕಟಸ್ವಾಮಿ, ಮುಖಂಡರಾದ ಎಸ್.ಎಂ.ರಮೇಶ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!