Home News ಪ್ರಾಥಮಿಕ ವ್ಯವಸಾಯ ಕೃಷಿ ಮತ್ತು ಗ್ರಾಮೀಣ ಅಭಿವೃಧ್ದಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪ್ರಾಥಮಿಕ ವ್ಯವಸಾಯ ಕೃಷಿ ಮತ್ತು ಗ್ರಾಮೀಣ ಅಭಿವೃಧ್ದಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0

ಶಿಡ್ಲಘಟ್ಟ ತಾಲ್ಲೂಕಿನ ಪ್ರಾಥಮಿಕ ವ್ಯವಸಾಯ ಕೃಷಿ ಮತ್ತು ಗ್ರಾಮೀಣ ಅಭಿವೃಧ್ದಿ ಬ್ಯಾಂಕಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಚೀಮನಹಳ್ಳಿ ಗೋಪಾಲ್ ಉಪಾಧ್ಯಕ್ಷರಾಗಿ ರವಿ.ಎಂ.ಪಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಘೋಷಣೆ ಮಾಡಿದ್ದಾರೆ.
ತಾಲ್ಲೂಕಿನ ಪಿ.ಎಲ್.ಡಿ.ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಫೆಬ್ರವರಿ 15 ರ ಭಾನುವಾರದಂದು ಚುನಾವಣೆ ನಡೆದಿತ್ತು, ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅರ್ಭರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು, ಅಧ್ಯಕ್ಷ ಸ್ಥಾನಕ್ಕೆ ಅಬ್ಲೂಡು ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಿ.ಎಂ.ಗೋಪಾಲ್, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಂಜಿಗುಂಟೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎಂ.ಪಿ.ರವಿ ಅವರು ಮಾತ್ರ ಅರ್ಜಿಗಳನ್ನು ಸಲ್ಲಿಸಿದ್ದರಿಂದ ಇಬ್ಬರು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವವರನ್ನು ಕೆ.ಪಿ.ಸಿ.ಸಿ.ಉಪಾಧ್ಯಕ್ಷ ವಿ.ಮುನಿಯಪ್ಪ ಅಭಿನಂದಿಸಿದರು.
ಜಿ.ಪಂ.ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಮಾಜಿ ಕೋಚಿಮುಲ್ ಅಧ್ಯಕ್ಷ ಕೆ.ಗುಡಿಯಪ್ಪ, ಮಾಜಿ ಜಿ.ಪಂ.ಅಧ್ಯಕ್ಷ ವಿ.ಸುಭ್ರಮಣಿ, ಮಾಜಿ ತಾ.ಪಂ.ಅಧ್ಯಕ್ಷ ಮೌಲಾ, ಮಾಜಿ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಎ.ರಾಮಚಂದ್ರಪ್ಪ, ಗಂಗನಹಳ್ಳಿ ಬಿ.ಸಿ.ವೆಂಕಟೇಶಪ್ಪ, ಮುತ್ತೂರು ಚಂದ್ರೇಗೌಡ, ನಗರಸಭಾ ಸದಸ್ಯರಾದ ಚಿಕ್ಕಮುನಿಯಪ್ಪ, ಜೆ.ಎಂ.ಬಾಲಕೃಷ್ಣ, ಎಂ.ಮುನಿಕೃಷ್ಣಪ್ಪ, ಅಶ್ವಥ್ಥರೆಡ್ಡಿ, ಮಳಮಾಚನಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಮಾಂಜಿನಪ್ಪ, ಗುಡಿಹಳ್ಳಿ ನಾರಾಯಣಸ್ವಾಮಿ, ಮಯೂರ, ಕಾಳನಾಯಕನಹಳ್ಳಿ ಮಂಜುನಾಥ್, ಹಾಗೂ ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕರುಗಳು ಹಾಜರಿದ್ದರು.

error: Content is protected !!