32.7 C
Sidlaghatta
Friday, April 19, 2024

ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬರಲಿ

- Advertisement -
- Advertisement -

ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ತಮಿಳುನಾಡು ಸರ್ಕಾರ ಇದಕ್ಕೆ ಉದಾಹರಣೆಯಾಗಿದೆ ಎಂದು ಜೆ.ಡಿ.ಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿಯ ಪಟಾಲಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ನಡೆದ ವಿಧಾನಪರಿಷತ್ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾದವರು ಯಾವುದೇ ಪಕ್ಷದ ಚಿಹ್ನೆಯ ಅಡಿಯಲ್ಲಿ ಗೆದ್ದಿರುವುದಿಲ್ಲ. ಹಾಗಾಗಿ ವಿಧಾನಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲು ಅವರು ಸ್ವತಂತ್ರರು. ಪ್ರಾದೇಶಿಕ ಪಕ್ಷ ಮಹತ್ವವನ್ನು ವಿವರಿಸಿ ಪ್ರತಿಯೊಬ್ಬರನ್ನೂ ಮತ ಯಾಚಿಸಿ. ಎರಡೂ ಜಿಲ್ಲೆಗಳ ಅಭಿವೃದ್ಧಿಗಾಗಿ ದುಡಿಯಲು ಹಾಗೂ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಸ್ಪಂದಿಸಲು ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿ ಸಿ.ಆರ್.ಮನೋಹರ್ ಅವರನ್ನು ಗೆಲ್ಲಿಸುವಂತೆ ಕೋರಿದರು.
ಜೆ.ಡಿ.ಎಸ್ ಪಕ್ಷವನ್ನು ತುಳಿಯಲು ಹಲವಾರು ಷಡ್ಯಂತ್ರಗಳು ನಡೆಯುತ್ತಿದ್ದರೂ, ಪಕ್ಷವನ್ನು ಜೀವವಿರುವವರೆಗೂ ಉಳಿಸಿ ಬೆಳೆಸುವುದಾಗಿ ತಿಳಿಸಿದರು.
ವಿಧಾನಪರಿಷತ್ ಚುನಾವಣೆಯ ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿ ಸಿ.ಆರ್.ಮನೋಹರ್ ಮಾತನಾಡಿ, ಶಾಶ್ವತ ನೀರಾವರಿ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸುವುದು ಖಂಡನೀಯ. ಶಾಶ್ವತ ನೀರಾವರಿ ಯೋಜನೆ ಜಾರಿಗಳೊಳಿಸಲು ಸರ್ವ ಪ್ರಯತ್ನ ನಡೆಸುತ್ತೇನೆ. ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಶಾಸಕ ಎಂ.ರಾಜಣ್ಣ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ವಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಮಾಲೂರು ಶಾಸಕ ಮಂಜುನಾಥಗೌಡ, ಕೆ.ಪಿ.ಬಚ್ಚೇಗೌಡ, ಬಂಕ್ ಮುನಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯರಾದ ಶಿವಲೀಲಾ ರಾಜಣ್ಣ, ಹರಿನಾಥರೆಡ್ಡಿ, ನಗರಸಭೆ ಸದಸ್ಯ ಅಫ್ಸರ್ಪಾಷ, ಅಮರನಾಥ್, ಚೌಡರೆಡ್ಡಿ, ಮೇಲೂರು ರವಿಕುಮಾರ್, ಮೇಲೂರು ಮಂಜುನಾಥ್, ಮೇಲೂರು ಉಮೇಶ್, ರಹಮತ್ತುಲ್ಲ ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!