ಪ್ರೌಢಶಾಲಾ ಶಿಕ್ಷಕರ ಹಿಂದಿ ಮತ್ತು ಸಮಾಜವಿಜ್ಞಾನ ವಿಷಯ ಕಾರ್ಯಾಗಾರ

- Advertisement -
- Advertisement -

ತಾಲ್ಲೂಕಿನ ಗಂಜಿಗುಂಟೆ ಬಳಿ ೧೧ ನೇ ಮೈಲಿಯಲ್ಲಿರುವ ಮೊರಾರ್ಜಿದೇಸಾಯಿ ವಸತಿಶಾಲೆಯಲ್ಲಿ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ಶಿಕ್ಷಕರ ಹಿಂದಿ ಮತ್ತು ಸಮಾಜವಿಜ್ಞಾನ ವಿಷಯ ಕಾರ್ಯಾಗಾರವನ್ನು ಉದ್ಘಾಟಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು ಮಾತನಾಡಿದರು.
ಬದಲಾಗುತ್ತಿರುವ ಪಠ್ಯಕ್ರಮ, ಬೋಧನೆಯಲ್ಲಿ ತಂತ್ರಜ್ಞಾನ ಬಳಕೆಗೆ ಹೊಂದಿಕೊಳ್ಳಲು ಶಿಕ್ಷಕರು ನಿರಂತರ ಅಧ್ಯಯನಶೀಲರೂ, ಕ್ರಿಯಾಶೀಲರೂ ಆಗಬೇಕು. ಆ ಮೂಲಕ ವೃತ್ತಿಕೌಶಲವನ್ನು ವೃದ್ಧಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಶಿಕ್ಷಕರು ಎಲ್ಲವನ್ನೂ ಚಿಂತನೆಗೊಳಪಡಿಸಬೇಕು. ಮಕ್ಕಳ ಕೇಂದ್ರಿತ ಕಲಿಕೆಗೆ ಪೂರಕವಾಗಿ ಕಲಿಕಾ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಕಲಿಕೆಯಲ್ಲಿ ದೃಕ್‌ಶ್ರವಣೋಪಕರಣಗಳ ಬಳಕೆ, ಚಟುವಟಿಕೆ ಆದಾರಿತ ಕಲಿಕೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು.
ಅಕ್ಷರದಾಸೋಹ ತಾಲ್ಲೂಕು ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ, ತಾಲ್ಲೂಕಿನಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕಾಸಕ್ತಿಯನ್ನುಹೆಚ್ಚಿಸುವ ನಿಟ್ಟಿನಲ್ಲಿ ಉತ್ತಮ ಪರಿಸರವನ್ನು ಕಲ್ಪಿಸಲಾಗುತ್ತಿದೆ. ಅದಕ್ಕಾಗಿ ಬೆಳಗ್ಗೆ ಮತ್ತು ಸಂಜೆ ವೇಳೆ ಪರಿಹಾರ ಬೋಧನೆ ಕೈಗೊಳ್ಳಲಾಗುತ್ತಿದೆ. ಕಲಿಕಾಹಿಂದುಳಿದ ಮಕ್ಕಳಿಗಾಗಿ ಉತ್ತೀರ್ಣ ಅಂಕಗಳನ್ನು ಗಳಿಸಲು ಪಾಸಿಂಗ್ ಪ್ಯಾಕೇಜ್ ಒದಗಿಸಲಾಗುತ್ತಿದೆ ಎಂದರು.
ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಈಗಾಗಲೇ ಗಣಿತ ಮತ್ತು ವಿಜ್ಞಾನ ವಿಷಯಭೋಧಕರಿಗೆ ಪುನಶ್ಚೇತನ ಕಾರ್ಯಾಗಾರ ನಡೆಸಿದ್ದು, ಉಳಿದ ವಿಷಯಗಳ ಬೋಧಕರಿಗೂ ಕಾರ್ಯಾಗಾರಗಳನ್ನು ಯೋಜಿಸಲಾಗಿದೆ. ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ೨೪ ರವರೆಗೆ ತಾಲ್ಲೂಕು ಮಟ್ಟದ ಶಿಕ್ಷಣ ಅದಾಲತ್ ಇದ್ದು ಕ್ರಮಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಲಕ್ಷ್ಮಿನರಸಿಂಹಗೌಡ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಂ.ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಟಿ.ವಿ.ಚಂದ್ರಶೇಖರ್, ತಾಲ್ಲೂಕು ಖಾಸಗಿ ಪ್ರೌಢಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಿನಾಥ್, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಲ್.ವೆಂಕಟರೆಡ್ಡಿ, ಸಹಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಮೊರಾರ್ಜಿದೇಸಾಯಿ ವಸತಿಶಾಲೆಯ ಮುಖ್ಯಶಿಕ್ಷಕಿ ಕುಬ್ರಾ, ತಾಲ್ಲೂಕಿನ ಪ್ರೌಢಶಾಲಾ ಶಿಕ್ಷಕರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!