24.1 C
Sidlaghatta
Saturday, November 1, 2025

ಬಂದ್ ಗೆ ಉತ್ತಮ ಪ್ರತಿಕ್ರಿಯೆ

- Advertisement -
- Advertisement -

ತಾಲ್ಲೂಕಿನಾದ್ಯಂತ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಗುರುವಾರ ಜನರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ರಸ್ತೆಯಲ್ಲಿ ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ಪೆಟ್ರೋಲ್ ಬಂಕ್, ಸಿನಿಮಾ ಮಂದಿರಗಳು, ಬ್ಯಾಂಕ್ಗಳು, ಶಾಲಾ ಕಾಲೇಜುಗಳು ಮುಚ್ಚಿದ್ದವು.
ಮಹದಾಯಿ ಮಧ್ಯಂತರ ಆದೇಶ ಕನ್ನಡಿಗರಿಗೆ ವಿರುದ್ಧವಾಗಿದೆ. ನೀರಿನ ವಿಷಯದಲ್ಲಿ ಕರ್ನಾಟಕದ ಗಡಿಭಾಗದಲ್ಲಿನ ಜನರಿಗೆ ಸದಾ ನೀರಿನ ವಿಷಯದಲ್ಲಿ ತಾರತಮ್ಯವಾಗುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಆರೋಪಿಸಿದರು.
ಬೈಕ್ಗಳಲ್ಲಿ ರ್ಯಾಲಿ ನಡೆಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬಸ್ ನಿಲ್ದಾಣದ ಬಳಿ ಮಾನವ ಸರಪಣಿ ನಿರ್ಮಿಸಿ ತಿಂಡಿ ಸೇವಿಸಿದರು.
ತಾಲ್ಲೂಕು ವಕೀಲರ ಸಂಘದಿಂದ ನ್ಯಾಯಾಂಗ ಕಲಾಪದಿಂದ ಹೊರಗುಳಿಯುವ ಮೂಲಕ ಬಂದ್ಗೆ ಬೆಂಬಲ ಸೂಚಿಸಿದರು. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.
ಇದು ಉತ್ತರ ಕರ್ನಾಟಕ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂಥ ಮಾನವೀಯ ವಿಚಾರವಾಗಿದ್ದು, ನ್ಯಾಯಾಧೀಕರಣ ನೀಡಿದ ತೀರ್ಪು ಸರಿಯಿಲ್ಲ. ಲೋಕಸಭೆಯಲ್ಲಿ ಜನರ ಪರ ಧ್ವನಿಯಾದಬೇಕಿರುವ ಜನಪ್ರತಿನಿಧಿಗಳು ತೀರ್ಪಿನ ವಿದುದ್ಧ ಧ್ವನಿ ಎತ್ತುವ ಮೂಲಕ ಜನರ ಹಿತ ಕಾಯಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಆಗ್ರಹಿಸಿದರು.
ಸಂಬಳಕ್ಕಾಗಿ ಪ್ರತಿಭಟನೆ, ಧ್ವನಿ ಎತ್ತುವ ಸಂಸದರು, ಈಗ ಕೇಂದ್ರದ ಮೇಲೆ ಒತ್ತಡ ಹೇರಿ, ಉತ್ತರ ಕರ್ನಾಟಕದ ಜನರ ಬದುಕಿನ ಪ್ರಶ್ನೆಗೆ ಸರಿಯಾದ ಸಮಾಧಾನ ನೀಡಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ನಮಗೆ ನೀರಿನ ತೊಂದರೆಯ ಕಷ್ಟ ತಿಳಿದಿರುವ ಕಾರಣ ಉತ್ತರ ಕರ್ನಾಟಕದವರ ಕಷ್ಟಕ್ಕೆ ಸ್ಪಂದಿಸುತ್ತಿರುವುದಾಗಿ ಹೇಳಿದರು.
ರೈತ ಸಂಘದ ನಾರಾಯಣಸ್ವಾಮಿ, ಮುನಿನಂಜಪ್ಪ, ಆನೂರು ದೇವರಾಜ್, ರಾಮಕೃಷ್ಣಪ್ಪ, ಶ್ರೀನಿವಾಸರೆಡ್ಡಿ, ದೇವರಾಜ್, ವೇಣುಗೋಪಾಲ್, ಹಯಾತ್ಖಾನ್, ಮಳಮಾಚನಹಳ್ಳಿ ದೇವರಾಜ್, ರಾಮಚಂದ್ರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!