ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಪುರಾತನ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕೊನೆಯ ಕಾರ್ತಿಕ ಮಾಸದ ಸೋಮವಾರ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮತ್ತು ಪೂಜೆಗಳನ್ನು ಸಲ್ಲಿಸಲಾಯಿತು. ಎರಡು ದಿನಗಳ ಕಾಲ ನಡೆದ ಪೂಜಾ ವಿಧಿಗಳು ಮಂಗಳವಾರದವರೆಗೂ ಸಾಗಿತು.
ಗ್ರಾಮದ ಜನತೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಬಸವೇಶ್ವರ ಸ್ವಾಮಿರವರಿಗೆ ವಿಶೇಷ ಅಲಂಕಾರ, ಪೂಜೆ ಹಾಗೂ ದೇವರಿಗೆ ಹೋಮಗಳು, ಎರಡು ದಿನಗಳ ಕಾಲ ನಡೆಯಿತು ಕೋಲಾರ, ಬೆಂಗಳೂರು, ಬಂಗಾರಪೇಟೆ ಹಾಗೂ ಇನ್ನೂ ಹಲವಾರು ಊರುಗಳಿಂದ ಭಕ್ತಧಿಗಳು ಬಂದು ದೇವರಿಗೆ ಪೂಜೆ ಸಲ್ಲಿಸಿದರು.
ಶ್ರೀ ಬಸವೇಶ್ವರ ಸ್ವಾಮಿ ದೇವರನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿ ದೇವರಿಗೆ ಗ್ರಾಮದ ಜನರು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಶೇಷವಾಗಿ ವೀರಭದ್ರ ವೇಷದ ವೀರಗಾಸೆ ನೃತ್ಯವನ್ನು ಆಯೋಜಿಸಲಾಗಿತ್ತು.
ತೀರ್ಥ ಪ್ರಸಾದಗಳನ್ನು ವಿನಿಯೋಗಿಸಿದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -