ಬಡ ಮಹಿಳೆಯರಿಗೆ ಮಾಶಾಸನ ವಿತರಣೆ

- Advertisement -
- Advertisement -

ಶೈಕ್ಷಣಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ನಗರದ ಇಲಾಹಿನಗರದಲ್ಲಿ ಜೈಕರ್ನಾಟಕ ಇಲಾಹಿ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುರುವಾರ ಸಂಜೆ ಬಡ ಮಹಿಳೆಯರಿಗೆ ಮಾಶಾಸನ ವಿತರಣೆ ಮತ್ತು ಸೇವಾ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ೬ ವರ್ಷದಿಂದ ೧೪ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಕಂದಾಯ ಇಲಾಖೆ ಮತ್ತು ಸರ್ಕಾರದ ಇನ್ನತರೆ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಕಾರ್ಯಾಗಾರ ಮತ್ತು ಜಾಗೃತಿ ಮೂಡಿಸಬೇಕೆಂದರು.
ಕಂದಾಯ ಇಲಾಖೆಯಿಂದ ವಯೋವೃದ್ಧರಿಗೆ, ಅಂಗವಿಕಲರಿಗೆ, ವಿಧವೆಯರಿಗೆ ಮಾಶಾಸನ ನೀಡಲಾಗುತ್ತದೆ. ೪೦ ವರ್ಷ ದಾಟಿರುವ ವಿವಾಹವಾಗದಿರುವ ಹೆಣ್ಣು ಮಕ್ಕಳಿಗೆ ಮಾಶಾಸನ ಹಾಗೂ ಶವಸಂಸ್ಕಾರಕ್ಕಾಗಿ ಆರ್ಥಿಕ ನೆರವು ಇನ್ನಿತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಟ್ರಸ್ಟ್ನ ಮೂಲಕ ಈ ಸೌಲಭ್ಯಗಳನ್ನು ತಲುಪಿಸಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಸೌಲಭ್ಯಗಳನ್ನು ಕೆಲವರು ಮಾತ್ರ ಪಡೆದುಕೊಳ್ಳುತ್ತಿದ್ದು ಸೌಲಭ್ಯಗಳ ಕುರಿತು ಎಲ್ಲಾ ವಾರ್ಡ್ ಮತ್ತು ಬೀದಿಗಳಲ್ಲಿ ವ್ಯಾಪಕ ಪ್ರಚಾರ ನಡೆಸುವ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ನಗರದ ಇಲಾಹಿನಗರದ ಇಬ್ಬರು ಬಡ ಹೆಣ್ಣು ಮಕ್ಕಳ ಮದುವೆಗೆ ಒಂದು ಮಂಚ, ಬೀರು ಹಾಗೂ ವೃದ್ಧರಿಗೆ ಮತ್ತು ವಿಧವೆಯರಿಗೆ ತಲಾ ೫೦೦- ರೂಗಳಂತೆ ಮಾಶಾಸನವನ್ನು ನೀಡಲಾಯಿತು.
ಜೈಕರ್ನಾಟಕ ಇಲಾಹಿ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ ಸರ್ದಾರ್, ಉಪಾಧ್ಯಕ್ಷ ದಾದಾಪೀರ್, ಕಾರ್ಯದರ್ಶಿ ರಹಮತ್ತುಲ್ಲಾ, ಖಜಾಂಚಿ ಜೀಲಾನ್ ಪಾಷ, ಟ್ರಸ್ಟ್ನ ಸದಸ್ಯರಾದ ಸರ್ದಾರ್, ಇಂತಿಯಾಜ್ಮೌಲಾ, ಮಹಬೂಬ್ ಪಾಷ, ತಮೀಮ್, ಚಾಂದ್ಪಾಷ, ನಗರ ಸಭೆ ಸದಸ್ಯ ಶಫೀಉಲ್ಲಾ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!