ಬಯಲು ಶೌಚಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಪಿ.ಡಿ.ಓ ಗಳು ಕಾರ್ಯಪ್ರವೃತ್ತರಾಗಿ

- Advertisement -
- Advertisement -

ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಮನೆಗೊಂದು ಶೌಚಾಲಯ ನಿರ್ಮಾಣ ಮಾಡುವ ಮೂಲಕ ಬಯಲು ಶೌಚಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಹೇಳಿದರು.
ನಗರದ ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿ ಶನಿವಾರ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಪಿ.ಡಿ.ಓ.ಗಳಿಗೆ ಆಯೋಜನೆ ಮಾಡಲಾಗಿದ್ದ ಸ್ಯಾಟ್ಕಾಂ ತರಬೇತಿಯಲ್ಲಿ ಅವರು ಮಾತನಾಡಿದರು.
ಸರ್ಕಾರದಿಂದ ಬಿಡುಗಡೆಯಾಗುವಂತಹ ಅನುಧಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು, ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವಂತಹ ಹೊಣೆಗಾರಿಕೆ ಪಂಚಾಯತಿಗಳ ಅಧಿಕಾರಿಗಳ ಮೇಲಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಸಿಗುವಂತಹ ಎಲ್ಲಾ ತರಬೇತಿಗಳಲ್ಲಿ ಸಿಗುವಂತಹ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮಲ್ಲಿರುವ ಅನುಮಾನಗಳನ್ನು ಪರಿಹರಿಸಿಕೊಳ್ಳಬೇಕು. ನರೇಗಾ ಯೋಜನೆಯಡಿಯಲ್ಲಿ ಮಾಡುವಂತಹ ಕಾಮಗಾರಿಗಳಿಗೆ ಅನುಸರಿಸಬೇಕಾದಂತಹ ಮಾನದಂಡಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳಲು ಇಂತಹ ಅವಕಾಶಗಳನ್ನು ಬಳಕೆ ಮಾಡಿಕೊಳ್ಳಬೇಕು.
ಸಂಜೀವಿನಿ ಯೋಜನೆಯಡಿಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಮೂಲಕ ಸಬಲೀಕರಣಕ್ಕೆ ಆದ್ಯತೆಯನ್ನು ನೀಡುವುದು, ಸುತ್ತುನಿಧಿ ವಿತರಣೆ ಮಾಡುವುದರ ಬಗ್ಗೆ ತರಬೇತಿಯಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತಿದೆ ಎಂದರು.
ನರೇಗಾ ಯೋಜನೆಯ ಯೋಜನಾ ನಿರ್ದೇಶಕ ಶ್ರೀನಾಥ್ಗೌಡ ಮಾತನಾಡಿ, ಇಂತಹ ತರಬೇತಿಗಳು, ಸ್ಥಳೀಯ ಅಧಿಕಾರಿಗಳಲ್ಲಿ ಇರುವಂತಹ ಗೊಂದಲಗಳನ್ನು ನಿವಾರಣೆ ಮಾಡುವುದರ ಜೊತೆಗೆ ಅಭಿವೃದ್ಧಿಗಾಗಿ ಕ್ರೀಯಾಯೋಜನೆಗಳನ್ನು ತಯಾರಿಸಲು, ಸಹಕಾರಿಯಾಗುತ್ತವೆ. ಖಾತೆಗಳಿಗೆ ಸಂಬಂಧಿಸಿದಂತೆ, ಪಂಚಾಯತಿ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ಬರುವಂತಹ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಹಕಾರಿಯಾಗಲಿದ್ದು, ಅಧಿಕಾರಿಗಳು ಮಾತ್ರವಲ್ಲದೆ, ಜನಪ್ರತಿನಿಧಿಗಳೂ ಕೂಡಾ ತರಬೇತಿಗಳಲ್ಲಿ ಭಾಗವಹಿಸಿ ತಿಳಿದುಕೊಳ್ಳಬೇಕು ಎಂದರು.
ಗ್ರಾಮ ಪಂಚಾಯತಿ ಪಿ.ಡಿ.ಓ.ಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಸಂಶಯಗಳನ್ನು ಪರಿಹರಿಸಿಕೊಂಡರು.
ಪಿ.ಡಿ.ಓ.ಗಳಾದ ಪಿ.ವಿ.ಸಿದ್ದಣ್ಣ, ಗೋಪಿನಾಥ್, ಟಿ.ಎಂ.ಅಶ್ವಥ್, ಸಿ.ರಾಜಣ್ಣ, ಗೌಸ್ಪಿರ್, ಶ್ರೀನಿವಾಸ್, ನಾಗರಾಜಯ್ಯ, ತಾಲ್ಲೂಕು ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!