ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಉತ್ತಮ ಗುರಿಯನ್ನಿಟ್ಟುಕೊಳ್ಳುವುದರೊಂದಿಗೆ ದೈಹಿಕ ಹಾಗು ಮಾನಸಿಕ ಸಧೃಡತೆ ಕಾಪಾಡಿಕೊಳ್ಳಬೇಕು ಎಂದು ಬಿಜಿಎಸ್ ಶಾಲೆಯ ಪ್ರಾಂಶುಪಾಲ ಆರ್ ಮಹದೇವ್ ಹೇಳಿದರು.
ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ಸಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಕ್ರೀಡಾ ದಿನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಧುನಿಕತೆ ಬೆಳೆದಂತೆಲ್ಲಾ ಯುವಕರು ಬೇರೆ ಬೇರೆ ಕ್ಷೇತ್ರಗಳ ವ್ಯಾಮೋಹಕ್ಕೆ ಒಳಗಾಗುತ್ತಿದ್ದು ಈಚೆಗೆ ಕ್ರೀಡಾಕ್ಷೇತ್ರದಲ್ಲಿ ಗುರುತಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಓದಿನ ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ತಾಲ್ಲೂಕು ದೈಹಿಕ ಪರಿವೀಕ್ಷಕ ಶ್ರೀನಿವಾಸ್ ಮಾತನಾಡಿ ಪೋಷಕರು ಸಹ ತಮ್ಮ ಮಕ್ಕಳನ್ನು ದಿನದ ಕನಿಷ್ಟ ಅರ್ಧ ಗಂಟೆಯಾದರೂ ಆಟವಾಡಲು ಬಿಡಬೇಕು ಆಗ ಮಾತ್ರ ಚಿಕ್ಕ ಮಕ್ಕಳ ಆರೋಗ್ಯ ಹಾಗು ಶರೀರ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.
ಕ್ರೀಡಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡೆಗಳಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







