29.5 C
Sidlaghatta
Tuesday, March 3, 2026

ಬಿಜೆಪಿಯಿಂದ ಪಂಜಿನ ಮೆರವಣಿಗೆ

- Advertisement -
- Advertisement -

ರಾಜ್ಯ ಸರ್ಕಾರದ ದುರಾಡಳಿತ ಹಾಗೂ ದ್ವೇಷ ರಾಜಕಾರಣದ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ನಡೆಸುತ್ತಿರುವುದಾಗಿ ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ನಗರದ ದೇಶದಪೇಟೆಯ ಶ್ರೀ ಬಸವೇಶ್ವರ ದೇವಾಲಯದಿಂದ ಬುಧವಾರ ರಾತ್ರಿ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಬೃಹತ್ ಪಂಜಿನ ಪ್ರತಿಭಟನಾ ಮೆರವಣೆಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡು, ವಿರೋಧ ಪಕ್ಷದವರನ್ನು ದಮನ ಮಾಡಲು ಹೊರಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ ಆರೋಪ ಹೊತ್ತಿರುವ ಐಟಿ ಧಾಳಿಗೊಳಗಾದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ, ರಮಾನಾಥ್ ರೈ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ನ್ಯಾಯಾಲಯಗಳಲ್ಲಿ ವಜಾಗೊಂಡಿದ್ದು, ಯಡಿಯೂರಪ್ಪ ಅವರ ಮೇಲಿನ ಕೇಸುಗಳನ್ನು ಎಸಿಬಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಮರುಜೀವ ನೀಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಮುಖಂಡ ಡಿ.ಆರ್.ಶಿವಕುಮಾರ್ ಗೌಡ ಮಾತನಾಡಿ, ರಾಜ್ಯದಲ್ಲಿ ಕಾನೂನು ಹದಗೆಟ್ಟು ದಕ್ಷ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸುರೇಶ್, ಶ್ರೀರಾಮರೆಡ್ಡಿ, ದಾಮೋದರ್, ಬೈರಾರೆಡ್ಡಿ, ಸುಜಾತಮ್ಮ, ಮುನಿರಾಜು ಕುಟ್ಟಿ, ಶ್ರೀರಾಮ್ ಹಾಜರಿದ್ದರು.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!