ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ (ಜಿಎಸ್ಟಿ) ಜಾರಿಗೆ ತಂದಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ತಾಲ್ಲೂಕು ಬಿಜೆಪಿ ಪಕ್ಷದ ವತಿಯಿಂದ ನಗರದ ಕೋಟೆ ವೃತ್ತದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ನೆರವೇರಿಸಿ ನಂತರ ಕೋಟೆ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನೆರವೇರಿಸಿ ಅವರು ಮಾತನಾಡಿದರು.
ಒಂದೇ ದೇಶ ಒಂದೇ ತೆರಿಗೆ ಎಂಬ ಘೋಷಣೆಯೊಂದಿಗೆ ಜುಲೈ ೦೧ ರಿಂದ ಜಾರಿಗೆ ತಂದಿರುವ ಜಿಎಸ್ಟಿ ಕಾಯಿದೆಯಿಂದ ದೇಶದ ಸಮಸ್ತ ಬಡವರಿಗೂ ಹಾಗು ರೈತರಿಗೆ ಬಹಳಷ್ಟು ಉಪಯೋಗವಾಗಲಿದೆ. ಇದರಿಂದ ದೇಶದ ಆರ್ತಿಕ ಪರಿಸ್ಥಿತಿ ಉತ್ತಮ ಗೊಳ್ಳುವುದು ಸೇರಿದಂತೆ ಕಪ್ಪುಹಣ ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದರು.
ಬಿಜೆಪಿ ಪಕ್ಷದ ಶಿವಕುಮಾರಗೌಡ, ಬೈರರೆಡ್ಡಿ, ಭಾಸ್ಕರರೆಡ್ಡಿ, ಇಶ್ಫಾಕ್ಅಹಮ್ಮದ್, ಶ್ರೀರಾಮ, ಸುಜಾತಮ್ಮ, ಪಾರಿಜಾತ, ರವಿ, ಮುನಿರಾಜು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







