27 C
Sidlaghatta
Sunday, February 22, 2026

ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ

- Advertisement -
- Advertisement -

ಭ್ರಷ್ಟರ ಪಾಲಿಗೆ ಸಿಂಹಸ್ವಪ್ನದಂತಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಎಸಿಬಿ ಜಾರಿಗೊಳಿಸಲು ಮುಂದಾಗಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಮ್ಮ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
೧೯೮೦ ರ ಏಪ್ರಿಲ್ ೬ ರಂದು ಅಟಲ್ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿ ಯವರನ್ನೊಳಗೊಂಡ ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಅವರ ಅಧ್ಯಕ್ಷತೆಯಲ್ಲಿ ಉದಯವಾದ ಬಿಜೆಪಿ ಪಕ್ಷ ರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ೨೫ ವರ್ಷಗಳ ಕಾಲ ಬೇಕಾಯಿತು. ರಾಷ್ಟ್ರದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ. ರಾಷ್ಟ್ರದಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಎಂದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿ, ಇದೀಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಮಾಡಬೇಕು ಎಂದರು.
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಎಸಿಬಿ ವಿರುದ್ದ ಸಹಿ ಸಂಗ್ರಹಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಸಿ.ವಿ.ಲೋಕೇಶ್ಗೌಡ, ಶ್ರೀಧರ್, ಶ್ರೀರಾಮರೆಡ್ಡಿ, ಸುಜಾತಮ್ಮ, ಮಂಜುಳಮ್ಮ, ಸುರೇಶ್, ಗುರುವಯ್ಯಯಾದವ್, ದಾಮೋದರ್, ಮುನಿವೆಂಕಟಪ್ಪ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!