ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯ ಹೊಣೆ ಹೊತ್ತು ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಿದ ಬಿ.ಎನ್.ರವಿಕುಮಾರ್ ಕ್ಷೇತ್ರದ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಹೇಳಿದರು.
ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ರ ೪೯ ನೇ ಹುಟ್ಟುಹಬ್ಬದ ಅಂಗವಾಗಿ ಬುಧವಾರ ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಮಕ್ಕಳಿಂದ ಕೇಕ್ ಕತ್ತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿ.ಎನ್.ರವಿಕುಮಾರ್ ಜನಾನುರಾಗಿ ನಾಯಕರಾಗಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ ೯ ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸೋಲನುಭವಿಸಬೇಕಾಯಿತು. ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಮುಖಂಡರು ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಮೂಲಕ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡುವ ಪಣ ತೊಡಬೇಕು ಎಂದರು.
ಇದೇ ಸಂದರ್ಭದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಜೆಡಿಎಸ್ ಕಾರ್ಯಕರ್ತರಿಂದ ಬ್ರೆಡ್, ಹಣ್ಣು ಹಂಪಲು ವಿತರಿಸಲಾಯಿತು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ.ಬಿ.ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಎಂ.ಗೋಪಾಲ್, ಮುಖಂಡರಾದ ಹುಜಗೂರು ರಾಮಯ್ಯ, ತಾದೂರು ರಘು ಹಾಜರಿದ್ದರು.
- Advertisement -
- Advertisement -
- Advertisement -







