22.1 C
Sidlaghatta
Monday, October 27, 2025

ಬೆಳೆಗಳಿಗೆ ವಿಮೆ ಮಾಡಿಸಲು ಅವಧಿ ವಿಸ್ತರಣೆ ಮಾಡಲು ಮನವಿ

- Advertisement -
- Advertisement -

ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆಯಡಿಯಲ್ಲಿ ರೈತರು ಬೆಳೆಯುತ್ತಿರುವ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ ೧೦ ಕ್ಕೆ ಕೊನೆಯ ದಿನವಾಗಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಸಹಾಯಕ ನಿರ್ದೇಶಕ ದೇವೇಗೌಡ ಅವರಿಗೆ ರೈತರು ಮನವಿ ಸಲ್ಲಿಸಿದರು.
ನಗರದ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಮಂಗಳವಾರ ಮನವಿ ಸಲ್ಲಿಸಿದ ಅವರು, ಸಾದಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ತೀರಾ ಹಿಂದುಳಿದಿದ್ದು, ರೈತರು ಬೆಳೆಯುತ್ತಿರುವ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಲು ರೈತರಿಗೆ ಅವಕಾಶವನ್ನು ಕಲ್ಪಿಸಲಾಗಿತ್ತು, ಆದರೆ ಬಹಳಷ್ಟು ಮಂದಿ ರೈತರಿಗೆ ಮಾಹಿತಿಯ ಕೊರತೆ ಹಾಗೂ ಆರ್ಥಿಕ ತೊಂದರೆಯಿಂದಾಗಿ ಇದುವರೆಗೂ ವಿಮೆ ಮಾಡಿಸಲು ಸಾಧ್ಯವಾಗಿಲ್ಲ. ಆದ್ದರಿಂದ ವಿಮೆ ಮಾಡಿಸಲು ಅವಧಿಯನ್ನು ವಿಸ್ತರಣೆ ಮಾಡಿಕೊಡಬೇಕು ಎಂದು ಸಾದಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಗೋವಿಂದರಾಜು ಒತ್ತಾಯ ಮಾಡಿದರು.
ಎಸ್.ಕೆ.ನಾರಾಯಣಪ್ಪ, ವೆಂಕಟರಮಣಪ್ಪ, ನರಸಿಂಹಪ್ಪ ಕೋಟಗಲ್ ನಂಜಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!