ಬೆಳ್ಳೂಟಿ ಗ್ರಾಮದಲ್ಲಿ ಆರ್.ಓ. ಪದ್ಧತಿಯ ಶುದ್ಧಿಕರಿಸಿದ ನೀರು ಸರಬರಾಜು ಘಟಕ

- Advertisement -
- Advertisement -

ಆನೂರು ಗ್ರಾಮ ಪಂಚಾಯಿತಿಯ ಬೆಳ್ಳೂಟಿ ಗ್ರಾಮದಲ್ಲಿ ಈಚೆಗೆ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಆರ್.ಓ. ಪದ್ಧತಿಯ ಶುದ್ಧಿಕರಿಸಿದ ನೀರು ಸರಬರಾಜು ಘಟಕವನ್ನು ಉದ್ಘಾಟಿಸಲಾಯಿತು.
ಸುಮಾರು ಎಂಟು ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣಗೊಂಡ ಆರ್.ಓ. ಘಟಕವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ಮಾತನಾಡಿ, ಈಗಾಗಲೇ ನಮ್ಮ ಭಾಗದಲ್ಲಿ ಅಂತರ್ಜಲ ಕುಸಿದಿದೆ. 1500 ಅಡಿಯವರೆಗೂ ಕೊಳವೆ ಬಾವಿಗಳನ್ನು ಕೊರೆಸುತ್ತಿದ್ದು, ಎಲ್ಲೆಡೆ ಫ್ಲೋರೈಡ್ ವ್ಯಾಪಿಸಿದೆ. ತಾಯಿಯ ಹಾಲಿನಲ್ಲೂ ಫ್ಲೋರೈಡ್ ಅಂಶಗಳಿವೆ ಎಂಬುದು ದೃಢಪಟ್ಟಿದೆ. ಹಾಗಾಗಿ ಜಿಲ್ಲಾ ಪಂಚಾಯಿತಿಯ ವತಿಯಿಂದ ಪ್ರತಿ ಪಂಚಾಯಿತಿಯಲ್ಲೂ ಫೋರೈಡ್ ಅಂಶ ಹೆಚ್ಚಿರುವ ಎರಡು ಹಳ್ಳಿಗಳನ್ನು ಗುರುತಿಸಿ ನೀರು ಶುದ್ಧೀಕರಣ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಇದನ್ನು ಗ್ರಾಮಸ್ಥರೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು. ಕುಡಿಯಲು ಮಾತ್ರ ಈ ನೀರನ್ನು ಬಳಸಿ. ನೀರನ್ನು ಮಿತವ್ಯಯವಾಗಿ ಬಳಸಿ, ಅಮೂಲ್ಯವಾದ ನೀರನ್ನು ಪೋಲು ಮಾಡಬಾರದು. ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಗೂ ಇಂಥಹ ನೀರು ಶುದ್ಧಿಕರಣ ಘಟಕಗಳನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.
ಮುಖಂಡರಾದ ನಂದಮುನಿಕೃಷ್ಣಪ್ಪ, ಆರ್.ಶ್ರೀನಿವಾಸ್, ಬೆಳ್ಳೂಟಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹನುಮೇಗೌಡ, ಬೈರೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ವೆಂಕಟೇಶ್, ಕಾರ್ಯದರ್ಶಿ ಶ್ರೀನಾಥ, ಕೆಂಪರೆಡ್ಡಿ, ಬೆಳ್ಳೂಟಿ ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!