20.1 C
Sidlaghatta
Tuesday, December 2, 2025

ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಗೆ ಪೂರಕವಾಗಿವೆ

- Advertisement -
- Advertisement -

ಮಕ್ಕಳಲ್ಲಿ ಅಡಗಿರುವ ನೈಜ ಪ್ರತಿಭೆಯನ್ನು ಹೊರತೆಗೆಯುವ ಕೆಲಸವನ್ನು ಮಾಡಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಲಕ್ಷ್ಮಿದೇವಮ್ಮ ಹೇಳಿದರು.
ನಗರದ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ೨೦೧೬-–೧೭ ನೇ ಸಾಲಿನ ೦೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಬೆಂಗಳೂರಿನ ಬಾಲಭವನ ಸೊಸೈಟಿ ಸಹಯೋಗದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬೇಸಿಗೆ ಶಿಬಿರಗಳು ಮಕ್ಕಳನ್ನು ಶಾರೀರಕವಾಗಿ ಹಾಗು ಮಾನಸಿಕವಾಗಿ ಸದೃಡರನ್ನಾಗಿಸುವುದರ ಜೊತೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೂ ಸಹಕಾರಿಯಾಗಲಿದೆ. ದಿನ ಪೂರ್ತಿ ಟಿವಿಯ ಮುಂದೆ ಕೂತು ಸಮಯ ಕಳೆಯುವ ಬದಲಿಗೆ ತಮ್ಮ ಮಕ್ಕಳನ್ನು ಹತ್ತು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರಕ್ಕೆ ಕಳುಹಿಸುವುದರಿಂದ ಇತರ ಮಕ್ಕಳ ಜೊತೆ ಬೆರೆತು ಆಡಿ ನಲಿಯುವುದರೊಂದಿಗೆ ಸಂವಹನ ಕೌಶಲ್ಯವನ್ನು ಕಲಿಯುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಉಲ್ಲೂರುಪೇಟೆ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ತಾಲ್ಲೂಕು ದೈಹಿಕ ಅಧಿಕಾರಿ ಶ್ರೀನಿವಾಸ್, ಜಂಗಮಕೋಟೆ ಸಿಆರ್ಪಿ ಸುಂದರಾಚಾರಿ, ಸಿಬ್ಬಂದಿ ಗಿರಿಜಾಂಬಿಕೆ, ಶಾಂತ, ರಾಧಮ್ಮ, ಸಂದೀಪ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!