14.1 C
Sidlaghatta
Wednesday, December 24, 2025

ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ

- Advertisement -
- Advertisement -

ಜಾತಿ, ಮತ ಭೇದವಿಲ್ಲದೇ ಎಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿ, ಪರಿಸರ ರಕ್ಷಣೆ ಜಾಗೃತಿ ಮೂಡಿಸಿದವರು. ಹಾಗೂ ಮಾನವನಿಗೆ ಮರುಜನ್ಮವೆಂಬುದಿಲ್ಲ ಎಂದು ಸಾರಿದ ಧೀಮಂತ ವ್ಯಕ್ತಿ ಬ್ರಹ್ಮಶ್ರೀ ನಾರಾಯಣ ಗುರು ಎಂದು ತಹಶೀಲ್ದಾರ್ ಅಜಿತ್ ಕುಮಾರ್ ರೈ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಮಹಾತ್ಮ ಗಾಂಧೀಜಿಯವರ ಒಡನಾಟದಲ್ಲಿ ಗುರುತಿಸಿಕೊಂಡು ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ. ಕೇರಳದ ಮೂಲದವರಾದ ಇವರು ದೇಶದಾದ್ಯಂತ ಸಂಚರಿಸಿ ಮನುಕುಲದ ಏಳಿಗೆಗೆ ಸಲ್ಲಿಸಿದ ಸೇವೆ ಸ್ಮರಿಸಿ ಅವರ ಸ್ಮರಣೆಯಲ್ಲಿ ಅಂಚೆ ಚೀಟಿ ಹಾಗು 5 ರೂ ನಾಣ್ಯದಲ್ಲಿ ಇವರ ಭಾವಚಿತ್ರವನ್ನು ಮುದ್ರಿಸುವ ಮೂಲಕ ಗೌರವ ತೋರಲಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ನಗರಸಭೆ ಆಯುಕ್ತ ಚಲಪತಿ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಎಸ್.ಐ. ಪ್ರದೀಪ್ ಪೂಜಾರಿ, ಆರ್ಯ ಈಡಿಗ ಸಂಘದ ತಾಲ್ಲೂಕು ಅಧ್ಯಕ್ಷ ಸಾದಲಿ ಎಸ್.ಎನ್.ವೆಂಕಟಾಚಲಪತಿ, ಕಾರ್ಯದರ್ಶಿ ಎಸ್.ಜೆ.ನಾಣಪ್ಪ, ವೆಂಕಟೇಶ, ನಾರಾಯಣಸ್ವಾಮಿ, ನಾಗಪ್ಪ, ರಾಮಪ್ಪ, ಅಶೋಕ ಹಾಜರಿದ್ದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!