ಈಚೆಗೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದ ವಾಡು ಇಂಟರ್ನ್ಯಾಷನಲ್ ಕರಾಟೆ ಫೆಡರೇಶನ್ ಶೈಲಿಯಲ್ಲಿ ನಡೆದ ಕರಾಟೆ ಬ್ಲಾಕ್ ಬೆಲ್ಟ್ ಪರೀಕ್ಷೆಯಲ್ಲಿ ತಾಲ್ಲೂಕಿನ ಕೆಲವು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಡಾನ್ ಬ್ಲಾಕ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಜಂಗಮಕೋಟೆ ಕ್ರಾಸ್ನ ಜ್ಞಾನಜ್ಯೋತಿ ಶಾಲೆಯ ರಾಮ್ಕುಮಾರ್, ಮೇಘನಾ, ನವೋದಯ ನಡಿಪಿನಾಯಕನಹಳ್ಳಿಯ ಪ್ರಮೋದ್, ಗಿರೀಶ್, ಮೋಹಿತ್, ದಾಮಿನಿ, ಕ್ರೆಸೆಂಟ್ ಶಾಲೆಯ ಜಾನ್ಸನ್ ರೆಡ್ಡಿ ಬ್ಲಾಕ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಾಗಿ ಕರಾಟೆ ಶಿಕ್ಷಕ ಮಹಮ್ಮದ್ ತಿಳಿಸಿದ್ದಾರೆ.
- Advertisement -
- Advertisement -
- Advertisement -
- Advertisement -