ಭಕ್ತರಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ಗ್ರಾಮಸ್ಥರ ಆರೋಗ್ಯದ ದೃಷ್ಟಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ರೂಪಿಸುತ್ತಿರುವುದು ಸ್ವಾಗತಾರ್ಹ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಂ.ಗೋಪಾಲಗೌಡ ತಿಳಿಸಿದರು.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ, ವಿಜಯಪುರ ಪ್ರಗತಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎಚ್.ಡಿ.ಡಿ ಹಾಗೂ ಜೆ.ಪಿ.ಎನ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ, ನೇತ್ರ ತಪಾಸಣಾ ಶಿಬಿರ ಮತ್ತು ರೆಡ್ ಕ್ರಾಸ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಗ್ರಾಮಸ್ಥರು ಮನೆಯ ಒಳಾಂಗಣ ಹೊರಾಂಗಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದಲ್ಲಿ ಅನೇಕ ರೋಗ ರುಜಿನಗಳಿಂದ ಬಳಲಬೇಕಾಗುತ್ತದೆ. ಆದ್ದರಿಂದ ಸ್ವಚ್ಛತೆ ಆರೋಗ್ಯ ಎರಡೂ ಮುಖ್ಯ. ಗ್ರಾಮಸ್ಥರು ಶಿಬಿರದ ಸದುಪಯೋಗ ಪಡೆದುಕೊಂಡು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.
ಕಣ್ಣಿನ ತಪಾಸಣೆಗೊಳಗಾದವರಿಗೆ ಉಚಿತವಾಗಿ ಕನ್ನಡಕಗಳನ್ನು ಎಚ್.ಡಿ.ಡಿ ಹಾಗೂ ಜೆ.ಪಿ.ಎನ್ ಟ್ರಸ್ಟ್ ವತಿಯಿಂದ ನೀಡಲಾಯಿತು. 52 ಯೂನಿಟ್ ರಕ್ತ ಸಂಗ್ರಹಣೆ ಮಾಡಲಾಯಿತು.
ಮುನಿರಾಜು, ಬಿ.ಎನ್.ಶಿವಮೂರ್ತಿ, ಕೇಶವಮೂರ್ತಿ, ರಘುರಾಜ್, ಚನ್ನೇಗೌಡ, ಬಿ.ಆರ್.ಮಂಜುನಾಥ್, ಮಿಥುನ್, ಆನಂದ್ಕುಮಾರ್, ಶಿಬಿರಾಧಿಕಾರಿ ಆರ್.ಶೆಟ್ಟಿನಾಯಕ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!