ತಾಲ್ಲೂಕಿನ ಜಂಗಮಕೋಟೆ ರಸ್ತೆಯಲ್ಲಿರುವ ಭಕ್ತರಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗಿನ ಜಾವ ಅಪಘಾತ ನಡೆದಿದ್ದು, ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಗಂಗರಾಜು(26) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಈತ ಆಂಧ್ರದ ರಾಮಸಮುದ್ರದ ನಿವಾಸಿಯಾಗಿದ್ದು, ಭಕ್ತರಹಳ್ಳಿ ಗ್ರಾಮದ ಭವ್ಯಾ ಎಂಬುವವರನ್ನು ಆರು ತಿಂಗಳ ಹಿಂದೆ ವಿವಾಹವಾಗಿದ್ದರು. ಕಳೆದ ಹತ್ತು ದಿನಗಳಿಂದ ಭಕ್ತರಹಳ್ಳಿ ಗ್ರಾಮದಿಂದ ಬೆಂಗಳೂರಿಗೆ ಬೈಕಿನಲ್ಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಗುರುವಾರ ಬೆಳಗಿನ ಜಾವ ಅತಿಹೆಚ್ಚು ಮಂಜು ಕವಿದಿದ್ದು, ದ್ವಿಚಕ್ರ ವಾಹನದಲ್ಲಿ ತೆರಳಿದ್ದ ಗಂಗರಾಜು ತಲೆಗೆ ಹೆಲ್ಮೆಟ್ ಧರಿಸಿದ್ದರೂ ತೀವ್ರವಾಗಿ ತಲೆಗೆ ಹೊಡೆತ ಬಿದ್ದು ರಸ್ತೆ ಬದಿಯಲ್ಲಿ ಶವವಾಗಿ ಕಂಡುಬಂದಿದ್ದಾರೆ. ಯಾವ ರೀತಿಯ ಅಪಘಾತ ಸಮಭವಿಸಿದೆ ಎಂಬುದು ಖಚಿತವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ಜಂಗಮಕೋಟೆ ಹೊರಠಾಣೆಯ ಎ.ಎಸ್.ಐ ಈರಪ್ಪ ಭೇಟಿ ನೀಡಿದ್ದರು. ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







