ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

- Advertisement -
- Advertisement -

ತಾಲೂಕಿನ ರೈತರ ಜೀವನಮಟ್ಟ ಸುದಾರಿಸಿದೆ ಎಂದರೆ ಅದಕ್ಕೆ ಈ ಬಾಗದ ಹೈನುಗಾರಿಕೆ ಹಾಗು ಹಾಲು ಉತ್ಪಾದನೆಯೇ ಮುಖ್ಯ ಕಾರಣ ಎಂದು ಶ್ರೀ ಹೆಚ್.ಡಿ.ದೇವೇಗೌಡ ಮತ್ತು ಶ್ರೀ ಜಯಪ್ರಕಾಶ್ ನಾರಾಯಣ್ ರವರ ಸೇವಾಭಿವೃದ್ಧಿ ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷ ಬಿ.ಎನ್.ರವಿಕುಮಾರ್ ಹೇಳಿದರು.
ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸಲಾಗಿರುವ ನೂತನ ಕಟ್ಟಡದ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಮೂರು ದಶಕಗಳ ಹಿಂದೆ ಈ ಭಾಗದ ರೈತರ ಉಪಕಸುಬಾಗಿದ್ದ ಹೈನುಗಾರಿಕೆ ಇದೀಗ ಮುಖ್ಯ ಕಸುಬಾಗಿ ರೂಪುಗೊಂಡಿದೆ. ಈ ಭಾಗದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದ್ದು ಕೃಷಿ ಮಾಡಲಾಗದೇ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ತಾಲೂಕಿನಿಂದ ಸುಮಾರು 1 ಲಕ್ಷ ಲೀ ಗೂ ಹೆಚ್ಚು ಹಾಲು ಡೈರಿಗಳ ಮುಖಂತರ ಒಕ್ಕೂಟಕ್ಕೆ ಪೂರೈಸಲಾಗುತ್ತಿದೆ ಎಂದರು.
ಈ ಭಾಗದ ರೈತರ ಅದರಲ್ಲಿಯೂ ಬಡ ಯುವಕರನ್ನು ಗುರುತಿಸಿ ಕೋಚಿಮುಲ್ ಹಾಲು ಒಕ್ಕೂಟದಲ್ಲಿ ಉದ್ಯೋಗಾವಕಾಶ ಕಲ್ಪಿಸಿಕೊಡುವಂತೆ ಕೋಚಿಮುಲ್ ನಿರ್ದೇಶಕರಿಗೆ ಮನವಿ ಮಾಡಿದರು.
ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ ನಮ್ಮಲ್ಲಿ ನೀರಿಗೆ ಬರವಿದ್ದರೂ ಹಾಲಿಗೆ ಬರವಿಲ್ಲ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಪ್ರತಿ ದಿನ 10 ಲಕ್ಷ ಲೀಟರ್ ಹಾಲನ್ನು ಉತ್ಪಾದಿಸಲಾಗುತ್ತಿದೆ. ರೈತರಿಗೆ ಹೆಚ್ಚಿನ ಬೆಲೆ ಸಿಗಬೇಕಾದರೆ ಹಾಲನ್ನು ವಿವಿಧ ರೀತಿಯಲ್ಲಿ ಸಂಸ್ಕರಿಸಿ ದೇಶ ವಿದೇಶಗಳಿಗೆ ರಫ್ತು ಮಾಡಬೇಕು. ಅದಕ್ಕಾಗಿಯೇ ಅಪರೂಪದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ವಿಶೇಷವಾದ ಮೆಗಾ ಡೈರಿಯನ್ನು ನಿರ್ಮಿಸಲಾಗುತ್ತಿದ್ದು ಮುಂದಿನ ನಾಲ್ಕೈದು ತಿಂಗಳಲ್ಲಿ ಉದ್ಘಾಟನೆಯ ಬಾಗ್ಯ ಕಾಣಲಿದೆ ಎಂದರು.
ಶಿಬಿರ ಘಟಕದ ಉಪವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್ ಮಾತನಾಡಿ ಜಿಲ್ಲೆಯಲ್ಲಿಯೇ ಅತ್ಯಂತ ಹೆಚ್ಚಿನ ಹಾಲು ಉತ್ಪಾದನೆ ಮಾಡುವ ಡೈರಿಗಳಲ್ಲಿ ಎರಡನೇ ಸ್ಥಾನದಲ್ಲಿರುವ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಸಕ್ತ ವರ್ಷ 16 ಲಕ್ಷ ರೂ ಲಾಭದಲ್ಲಿ ನಡೆಯುತ್ತಿದೆ. ಜಿಲ್ಲೆಯ ಅತ್ಯುತ್ತಮ ಹಾಲು ಉತ್ಪಾದಕರ ಸಂಘಗಳಲ್ಲಿ ಇದೂ ಒಂದಾಗಿದ್ದು ಮುಂದಿನ ದಿನಗಳಲ್ಲಿ ಒಕ್ಕೂಟದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಅಳವಡಿಸಿಕೊಂಡು ಸಂಘ ಮತ್ತಷ್ಟು ಅಭಿವೃದ್ದಿಯಾಗಲಿ ಎಂದರು.
ಅತಿ ಹೆಚ್ಚಿನ ಹಾಲು ಸರಬರಾಜು ಮಾಡಿರುವ ರೈತರಾದ ಶಿವನಂಜುಂಡಸ್ವಾಮಿ, ರಾಮರೆಡ್ಡಿ ಮತ್ತು ನಾರಾಯಣಗೌಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ.ಚನ್ನೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾರಘು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಶಿವಾರೆಡ್ಡಿ, ಉಪವ್ಯವಸ್ಥಾಪಕ ಹನುಮಂತರಾವ್, ವಿಸ್ತರಣಾಧಿಕಾರಿ ಅಮರೇಶ್, ಗ್ರಾ.ಪಂ ಅಧ್ಯಕ್ಷ ಬಿ.ಎಂ.ಗೋಪಾಲಗೌಡ, ಉಪಾಧ್ಯಕ್ಷೆ ಶಶಿಕಲಾ ನಟರಾಜ್, ತಾ.ಪಂ ಸದಸ್ಯರಾದ ರಾಜಶೇಖರ್, ಚಂದ್ರಕಲಾ ಬೈರೇಗೌಡ, ಮುಖ್ಯ ಕಾರ್ಯನಿರ್ವಾಹಕ ವಿ.ನಾರಾಯಣಸ್ವಾಮಿ, ಮುಖಂಡರಾದ ಮುಗಿಲಡಿಪಿ ನಂಜಪ್ಪ, ಜೆ.ಎಂ.ವೆಂಕಟೆಶ್, ಆರ್.ಎ.ಉಮೇಶ್, ತಾದೂರು ರಘು, ನಾಗಮಂಗಲ ಶ್ರೀನಿವಾಸಗೌಡ, ಚಂದ್ರೇಗೌಡ, ರಘು, ಕೆಂಪೇಗೌಡ, ಮುನೇಗೌಡ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!