ಭಾವನಾ ಮಹರ್ಷಿ ಜಯಂತ್ಯುತ್ಸವ

- Advertisement -
- Advertisement -

ನಗರದ ಉಲ್ಲೂರುಪೇಟೆಯ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಭಾನುವಾರ ಭಾವನಾ ಮಹರ್ಷಿ ಜಯಂತ್ಯುತ್ಸವದ ಅಂಗವಾಗಿ ಗಂಗಾಪೂಜೆ, ಕಳಶಸ್ಥಾಪನೆ, ಭಾವನಾ ಮಹರ್ಷಿ ಮತ್ತು ಭದ್ರಾವತಿ ದೇವಿಯ ಕಲ್ಯಾಣೋತ್ಸವ, ಲಾಜಾ ಹೋಮ, ವಿಶೇಷ ಪೂಜೆಯನ್ನು ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು.
ಸಂಜೆಗೆ ವೀರಾಂಜನೇಯಸ್ವಾಮಿ, ಭದ್ರಾವತಿ ಹಾಗೂ ಭಾವನಾ ಮಹರ್ಷಿಗಳ ಉತ್ಸವ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಿದ್ದ ಹೂವಿನ ಪಲ್ಲಕ್ಕಿಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ತಮಟೆ ವಾದ್ಯ ವೃಂದದೊಂದಿಗೆ ಮೆರವಣಿಗೆ ಮಾಡಲಾಯಿತು.
ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಸಂಗೀತ ಕಚೇರಿಯನ್ನು ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು. ಹಾಡುಹಾರಿಕೆ – ವಿದ್ವಾನ್‌ ಎಸ್‌.ವಿ.ರಾಮಮೂರ್ತಿ, ಪಿಟೀಲು ವಿದ್ವಾನ್‌ ಆರ್‌.ಜಗದೀಶ್‌ಕುಮಾರ್‌, ಮೃದಂಗ ವಿದ್ವಾನ್‌ ಎಸ್‌.ಎನ್‌.ಲಕ್ಷ್ಮೀನಾರಾಯಣ, ಖಂಜಿರ ಕೆ.ವಿ.ಕೃಷ್ಣಮೂರ್ತಿ ನುಡಿಸಿದರು.
ತಾಲ್ಲೂಕು ಪದ್ಮಶಾಲಿ ಸಂಘ ಹಾಗೂ ಪದ್ಮಶಾಲಿ ಯುವಜನ ಸೇವಾ ಸಂಘದ ಸದಸ್ಯರು ಸಂಜೆ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!