26 C
Sidlaghatta
Wednesday, June 25, 2025

ಮಕ್ಕಳಲ್ಲಿ ಮೌಲ್ಯಗಳನ್ನು ಬೆಳಸುವಲ್ಲಿ ಶಾಲೆಗಳ ಪಾತ್ರ ದೊಡ್ಡದು

- Advertisement -
- Advertisement -

ಮೌಲ್ಯಗಳನ್ನು ಬೆಳಸುವಲ್ಲಿ ಶಾಲೆಗಳ ಪಾತ್ರ ದೊಡ್ಡದು, ಶಿಕ್ಷಕರು ಮತ್ತು ಪೋಷಕರು ಮಾತ್ರ ಮಕ್ಕಳಲ್ಲಿ ಮೌಲ್ಯಗಳನ್ನು ಬೆಳಸಬಲ್ಲರು ಎಂದು ಅಕಾಡೆಮಿ ಆಫ್‌ ಕ್ರಿಯೇಟಿವ್ ಟೀಚಿಂಗ್‌ನ ಅಧ್ಯಕ್ಷ ಪ್ರೊ.ಗುರುರಾಜ್ ಕರಜಗಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ಎಂ.ಮೂರ್ತಿ ಸ್ಮರಣಾರ್ಥ ಶನಿವಾರ ಏರ್ಪಡಿಸಲಾಗಿದ್ದ ಜ್ಞಾನ ಕಲೋತ್ಸವ ೨೦೧೬–೧೭ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮರಗಳಿಗೆ ಬೇರು ಹೇಗೆ ಮುಖ್ಯವೋ ಅದೇ ರೀತಿ ಮಕ್ಕಳಿಗೆ ತಮ್ಮ ಸಂಸ್ಕೃತಿ ಮುಖ್ಯ, ಮಕ್ಕಳು ಬರೀ ಅಂಕಗಳಿಗಾಗಿ ಮಾತ್ರ ಓದಬಾರದು ಬದಲಿಗೆ ತಮ್ಮ ಸಂಸ್ಕೃತಿಯನ್ನು ಮರೆಯದೇ ತನ್ನ ಭವಿಷ್ಯ ತನ್ನದೇ ಕೈಯ್ಯಲಿದೆ ಎಂಬ ಮಾತನ್ನು ನೆನಪಿನಲ್ಲಿಟ್ಟುಕೊಂಡಿದ್ದೇ ಆದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಅತ್ಯುನ್ನತ ಸ್ಥಾನ ಅಲಂಕರಿಸುತ್ತಾರೆ ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸುವುದು ಕಷ್ಟವೇ ಸರಿ. ಇಂತಹ ಪರಿಸ್ಥಿತಿಯಲ್ಲೂ ಎಲ್ಲ ರೀತಿಯ ಸೌಲಭ್ಯಗಳೊಂದಿಗೆ ಒಳ್ಳೆಯ ವಾತಾವರಣದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಈ ವಿದ್ಯಾ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದ ಅವರು, ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿಯನ್ನು ಅಭಿನಂದಿಸಿದರು.
ರವಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ ವಿಜೇತ ವ್ಯಕ್ತಿತ್ವ ತರಬೇತುದಾರ ಆರ್.ಎ.ಚೇತನ್‌ಕುಮಾರ್ ಮಾತನಾಡಿ, ಶಾಲಾ ಮಕ್ಕಳು ಕೇವಲ ಪಾಠ, ಪ್ರವಚನಕ್ಕೆ ಮಾತ್ರವೇ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮೆದುಳನ್ನು ಸದಾ ಕ್ರಿಯಾಶೀಲವಾಗಿರುವಂತೆ ಮಾಡುವ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತವೆ ಎಂದರು.
ವಿದ್ಯಾರ್ಥಿಗಳು ಓದುವುದು, ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ಆ ನಂತರ ಒಂದು ಉದ್ಯೋಗ ಪಡೆಯುವುದೆ ಗುರಿ ಎಂದು ಭಾವಿಸದೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಗಮನಹರಿಸಿಬೇಕು. ಇದರಿಂದ ಸಾಮಾಜಿಕ ಕಳಕಳಿ ಭಾವನೆ ಬೆಳೆಯಲು ಕಾರಣವಾಗುತ್ತದೆ.
ಹೆಚ್ಚಿನ ಅಂಕಗಳನ್ನು ಗಳಿಸಿ ಉನ್ನತ ರ್ಯಾಂದಕ್ ಪಡೆಯುವಂತೆ ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ಬಿಟ್ಟು ಮಕ್ಕಳ ಆಸಕ್ತಿ ಯಾವ ವಿಷಯದ ಮೇಲೆ ಇದೆ ಎಂಬುದನ್ನು ಮೊದಲಿಗೆ ಗ್ರಹಿಸಿಕೊಳ್ಳಿ. ಆ ನಂತರ ಆ ಕ್ಷೇತ್ರದಲ್ಲಿಯೆ ಅವರನ್ನು ಮುಂದುವರೆಯಲು ಅವಕಾಶ ಮಾಡಿಕೊಡಿ ಎಂದು ಪೋಷಕರನ್ನು ವಿನಂತಿಸಿದರು.
ಶಾಲೆಯ ಶೈಕ್ಷಣಿಕ ಆಡಳಿತಾಧಿಕಾರಿ ಮನುಶ್ರೀ ರಾಜೀವ್‌ಕುಮಾರ್‌ ಶಾಲೆಯ ವರದಿಯನ್ನು ಮಂಡಿಸಿದರು.
ಗ್ರಾಮೀಣ ವಿದ್ಯಾಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಕೆ.ಗುಡಿಯಪ್ಪ, ಗ್ರಾಮೀಣ ವಿದ್ಯಾಭಿವೃದ್ದಿ ಸಂಸ್ಥೆಯ ಕಾರ್ಯದರ್ಶಿ ಬಿ.ಎಂ.ರಾಜೀವ್‌ಕುಮಾರ್, ಹಿರಿಯ ವಕೀಲ ಎಂ.ಪುಟ್ಟೇಗೌಡ, ವೈದ್ಯ ಆಂಜಿನಪ್ಪ, ಮುಖ್ಯ ಶಿಕ್ಷಕ ಎನ್.ಲಕ್ಷ್ಮಣಪ್ಪ, ಎಂ,ಕೆ.ಅಂಜನಾಮೂರ್ತಿ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!