ಮಕ್ಕಳು ವೃತ್ತಿ ಶಿಕ್ಷಣವನ್ನು ಪಡೆದಾಗ ಅವರ ಕ್ರಿಯಾಶೀಲತೆಯು ಅರಳುತ್ತದೆ

- Advertisement -
- Advertisement -

ಶಿಕ್ಷಣದಲ್ಲಿ ವೃತ್ತಿ ಶಿಕ್ಷಣವು ಅವಿಭಾಜ್ಯ ಅಂಗವಾಗಬೇಕು. ಗಾಂಧೀಜಿ ಮತ್ತು ರವೀಂದ್ರನಾಥ ಠಾಗೋರ್ ಅವರ ಪರಿಕಲ್ಪನೆಯ ಶಿಕ್ಷಣದಲ್ಲಿ ವೃತ್ತಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿತ್ತು ಎಂದು ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಮುನಿರತ್ನಂ ತಿಳಿಸಿದರು.
ನಗರದ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣದ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದೊಂದಿಗೆ ಮಕ್ಕಳು ವೃತ್ತಿ ಶಿಕ್ಷಣವನ್ನು ಪಡೆದಾಗ ಅವರ ಕ್ರಿಯಾಶೀಲತೆಯು ಅರಳುತ್ತದೆ. ಪ್ರಪಂಚ ಜ್ಞಾನ ವೃದ್ಧಿಸುತ್ತದೆ ಹಾಗೂ ಮುಂದೆ ಜೀವನದಲ್ಲಿ ಆರ್ಥಿಕವಾಗಿ ಸಬಲರಾಗಲು ಸಹಾಯಕವಾಗುತ್ತದೆ ಎಂದು ಹೇಳಿದರು.
ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕ ಆಂಜಿನಪ್ಪ ಮಾತನಾಡಿ, ಜಿಲ್ಲೆಯ ಆರು ತಾಲ್ಲೂಕುಗಳಿಂದ 36 ಶಾಲೆಗಳು ಈ ವೃತ್ತಿ ಶಿಕ್ಷಣದ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಹೊಲಿಗೆ ಎಂದು ಜಿಲ್ಲೆಯಲ್ಲಿ ವೃತ್ತಿ ಶಿಕ್ಷಣದ ನಾಲ್ಕು ವಿಭಾಗಗಳನ್ನು ಗುರುತಿಸಲಾಗಿದೆ. ಪ್ರತಿಯೊಂದು ವಿಭಾಗದಲ್ಲೂ ಮೂರು ಬಹುಮಾನಗಳನ್ನು ನೀಡುತ್ತುದ್ದು, ಪ್ರಥಮರಾದವರನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು ಎಂದು ಹೇಳಿದರು.
ಶಾರದಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ.ಎಂ.ಶ್ರೀಕಾಂತ್, ಮುಖ್ಯ ಶಿಕ್ಷಕ ವೆಂಕಟರಮಣಪ್ಪ, ಡಿ.ವೈ.ಪಿ.ಸಿ ಚಂದ್ರಶೇಖರಬಾಬು, ವೃತ್ತಿ ಶಿಕ್ಷಣ ಶಿಕ್ಷಕಿ ಹೇಮಾಕುಮಾರಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!