ಮಕ್ಕಳ ಜ್ಞಾನ ವೃದ್ಧಿಗಾಗಿ ಗಣಿತ ಆಂದೋಲನ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಜ್ಞಾನ ವೃದ್ಧಿಗಾಗಿ ವಿವಿಧ ಚಟುವಟಿಕೆಗಳನ್ನು ಆಗಾಗ ಹಮ್ಮಿಕೊಳ್ಳುತ್ತಿರಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಜಯರಾಮ್ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅಕ್ಷರಾ ಫೌಂಡೇಶನ್ ಹಾಗೂ ಹಂಡಿಗನಾಳ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮದಲ್ಲಿ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಕ್ಲಿಷ್ಟವೆನಿಸುವ ವಿಷಯಗಳನ್ನು ಸರಳವಾಗಿ ಇಷ್ಟವಾಗುವಂತೆ ಕಲಿಸುವ ಹಲವಾರು ವಿಧಾನಗಳಿವೆ. ಅವುಗಳನ್ನು ಅರಿತವರಿಂದ ಮಕ್ಕಳಿಗೆ ಆಡುತ್ತಾ ಕಲಿಯುವಂತೆ ಕಲಿಸಬಹುದಾಗಿದೆ. ಗ್ರಾಮ ಪಂಚಾಯಿತಿಯ ವಿವಿಧ ಸರ್ಕಾರಿ ಶಾಲೆಗಳ ಮಕ್ಕಳನ್ನು ಒಗ್ಗೂಡಿಸಿ ಕಲಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿ, ಈ ದಿನ ಮೌಲಾನಾ ಅಬ್ದುಲ್ ಕಲಂ ಆಜಾದ್ ಅವರ ದಿನವಾಗಿದೆ ಎಂದು ಹೇಳಿ ಅವರ ಜೀವನ ಸಾಧನೆ, ಹೋರಾಟ, ಆದರ್ಶಗಳನ್ನು ಮಕ್ಕಳಿಗೆ ವಿವರಿಸಿದರು.
ಗಣಿತ ಸ್ಪರ್ಧೆಯಲ್ಲಿ ವಿಜೇತರಾದ ನಾಲ್ಕು, ಐದು ಮತ್ತು ಆರನೇ ತರಗತಿಯ ತಲಾ ಮೂವರು ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯ ಜಯರಾಂ ಪ್ರೋತ್ಸಾಹಕರವಾಗಿ ನಗದು ಬಹುಮಾನ ವಿತರಿಸಿದರು. ಅಕ್ಷರಾ ಫೌಂಡೇಶನ್ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು. ಮಂಜುನಾಥ್, ಸಿದ್ದರಾಮ ಎನ್.ಕೋಟೆ, ಶಾಲಾ ಶಿಕ್ಷಕರು ಹಾಜರಿದ್ದರು.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!