ಹೆಣ್ಣುಮಕ್ಕಳಿಗೆ ಪೋಷಕರು ನೀತಿ ನಿಬಂಧನೆ ಬೋಧಿಸಿ ಬೆಳೆಸುವಂತೆ ಗಂಡುಮಕ್ಕಳನ್ನೂ ಬೆಳೆಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಿ.ಅನಿತಾ ತಿಳಿಸಿದರು.
ತಾಲ್ಲೂಕಿನ ನಾಗಮಂಗಲ ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಭಾನುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುವ ಅನ್ಯಾಯಗಳನ್ನು ಹೋಗಲಾಡಿಸಲು ಮಕ್ಕಳ ಪಾಲನೆಯಲ್ಲಿಯೇ ಸಮಾನತೆಯನ್ನು ಪೋಷಕರು ರೂಢಿಸಿಕೊಳ್ಳಬೇಕು. ಮಕ್ಕಳ ಪಾಲನೆಯಲ್ಲಿ ಪರಸ್ಪರ ಗೌರವ, ಸ್ನೇಹ ಸೌಹಾರ್ಧ, ಸಹಾಯ ಮನೋಭಾವ, ಕಷ್ಟಕ್ಕೆ ಮರುಗುವ ಗುಣಗಳನ್ನು ಕಲಿಸಬೇಕು. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗದು ಎಂದು ಹೇಳಿದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಮಾತನಾಡಿ, ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅದರಿಂದ ಜೀವನದಲ್ಲಿ ಕಷ್ಟವನ್ನು ಎದುರಿಸುವ ಧೈರ್ಯ ಬರುತ್ತದೆ. ತಪ್ಪುಗಳನ್ನು ಮಾಡದಂತೆ ಕಾನೂನಿನ ಅರಿವು ಕಾಪಾಡುತ್ತದೆ ಎಂದು ಹೇಳಿದರು.
ಅಪರ ನ್ಯಾಯಾಧೀಶರಾದ ಶ್ರೀಕಂಠ, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲಕ್ಷ್ಮೀದೇವಮ್ಮ, ಸೌಂದರ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ವಿಜಯಾ, ಅಬಕಾರಿ ನಿರೀಕ್ಷಕ ವಿಶ್ವನಾಥಬಾಬು, ಡಾ.ಅಂಬಿಕಾ, ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷ ಎಂ.ಡಿ.ನಾರಾಯಣಪ್ಪ, ಕಾರ್ಯದರ್ಶಿ ಗೋಪಿನಾಥ್, ಶ್ರೀನಿವಾಸಗೌಡ, ತಮ್ಮಣ್ಣ, ರಾಮಕೃಷ್ಣಪ್ಪ, ಸರ್ಕಾರಿ ವಕೀಲ ಈ.ಡಿ.ಶ್ರೀನಿವಾಸ್, ವಕೀಲರಾದ ಬೈರೇಗೌಡ, ಸತ್ಯನಾರಾಯಣಬಾಬು, ಲಕ್ಷ್ಮೀ, ಸುಬ್ರಮಣಿ, ನಾರಾಯಣಪ್ಪ, ಮಂಜುನಾಥ, ಚಂದ್ರಶೇಖರಗೌಡ, ಲೋಕೇಶ್, ನೌಶಾದ್ಅಲಿ ಮತ್ತಿತರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -