ಮಣ್ಣಿನ ಫಲವತ್ತತೆಯ ಪರೀಕ್ಷೆ ನಡೆಸಿ

- Advertisement -
- Advertisement -

ಮಣ್ಣಿನ ಫಲವತ್ತತೆಯ ಪರೀಕ್ಷೆ ನಡೆಸಿ ಅದಕ್ಕೆ ತಕ್ಕಂತೆ ಪೌಷ್ಠಿಕಾಂಶಗಳು ಮತ್ತು ರಸಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿ ಪಡೆಯಬಹುದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ವಿಶ್ವ ಮಣ್ಣಿನ ದಿನದ ಅಂಗವಾಗಿ ಸೋಮವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಕಿಸಾನ್‌ ಘೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರು ಕೃಷಿ ಮಾಡುವುದು ಬಹಳಷ್ಟು ದುಬಾರಿಯಾಗಿರುವ ಇಂದಿನ ದಿನಗಳಲ್ಲಿ ರೈತರು ಕಡಿಮೆ ವೆಚ್ಚದಲ್ಲಿ ಕೃಷಿ ಮಾಡುವ ಮೂಲಕ ಹೆಚ್ಚಿನ ಲಾಭ ಪಡೆಯಬೇಕು. ಉತ್ತಮ ಹಾಗೂ ಗುಣಮಟ್ಟದ ಕೃಷಿ ಮಾಡಿದಾಗ ಮಾತ್ರ ಕೃಷಿ ಕ್ಷೇತ್ರ ಲಾಭದಾಯಕವಾಗುತ್ತದೆ ಎಂದರು.
ಪ್ರತಿಯೊಬ್ಬ ರೈತರೂ ಮಣ್ಣಿನ ಪರೀಕ್ಷೆಯನ್ನು ಖಡ್ಡಾಯವಾಗಿ ಮಾಡಿಸಬೇಕು. ಮಣ್ಣಿನ ಪರೀಕ್ಷೆಯ ಅಂಕಿ ಅಂಶಗಳನ್ನು ಗಣಕೀಕೃತಗೊಳಿಸಲಾಗುತ್ತದೆ. ಇದರಿಂದ ರೈತರು ಯಾವ ಬೆಳೆ ಬೆಳೆಯಬಹುದು, ಅದಕ್ಕೆ ಬೇಕಾಗುವ ಪೌಷ್ಠಿಕಾಂಶಗಳೇನು ಮತ್ತು ಕಾಲಾನುಕ್ರಮದಲ್ಲಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ರೈತರು ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸುರಕ್ಷಿತ ಕೀಟ ನಾಶಕಗಳ ಬಳಕೆ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವಿಕೆಯ ಬಗ್ಗೆಯೂ ರೈತರಿಗೆ ಮಾಹಿತಿಯನ್ನು ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ, ಉಪಾಧ್ಯಕ್ಷ ನರಸಿಂಹಯ್ಯ, ಸಹಾಯಕ ಕೃಷಿ ನಿರ್ದೇಶಕ ದೇವೇಗೌಡ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್, ಪ್ರಗತಿಪರ ರೈತ ಹಿತ್ತಲಹಳ್ಳಿ ಗೋಪಾಲಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ರವಿಪ್ರಕಾಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾಟಾಚಾರದ ಕಾರ್ಯಕ್ರಮ: ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ವಿಶ್ವ ಮಣ್ಣಿನ ದಿನ ಕಾರ್ಯಕ್ರಮ ಕೇವಲ ಕಾಟಾಚಾರಕ್ಕೆ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಆರೋಪಿಸಿದರು. ಕಾರ್ಯಕ್ರಮದ ಬಗ್ಗೆ ಯಾವುದೇ ಪೂರ್ವಭಾವಿ ಸಭೆ ನಡೆಸಿಲ್ಲ, ಕರಪತ್ರ ಮುದ್ರಿಸಿಲ್ಲ. ತಾಲೂಕಿನಾಧ್ಯಂತ ಸಾವಿರಾರು ರೈತರಿದ್ದರೂ ಸಹ ಕೇವಲ ತಾಲ್ಲೂಕು ಕಚೇರಿ ಮತ್ತು ತಾಲ್ಲೂಕು ಪಂಚಾಯಿತಿಗೆ ವಿವಿಧ ಕೆಲಸಗಳ ಮೇಲೆ ಬಂದಿದ್ದ ಹತ್ತಿಪ್ಪತ್ತು ಮಂದಿ ಸಾರ್ವಜನಿಕರನ್ನು ಕರೆದು ಕಾರ್ಯಕ್ರಮ ನಡೆಸಿದ್ದಾರೆ. ರೈತರಿಗೆ ಈ ಬಗ್ಗೆ ಮಾಹಿತಿ ನೀಡುವ ಕೆಲಸವಾಗಲಿ ಕೃಷಿ ಇಲಾಖೆ ಅಧಿಕಾರಿಗಳು ಮಾಡಿಲ್ಲ. ಕೇವಲ ಜನಪ್ರತಿನಿಧಿಗಳನ್ನು ಓಲೈಸಲು ಹಾಗು ಇಲಾಖೆಯ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಷ್ಟೇ ಕಾರ್ಯಕ್ರಮ ಆಚರಿಸಿದ್ದಾರೆ ಎಂದು ಅವರು ದೂರಿದ್ದಾರೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!