ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯ ಹಿನ್ನಲೆಯಲ್ಲಿ ಫೆಬ್ರುವರಿ ೮ ರಂದು ಚುನಾವಣಾ ಮತಗಟ್ಟೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಕೆ.ಎಂ.ಮನೋರಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಿರುವ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಳ್ಳುವುದು. ಒಂದು ವೇಳೆ ಯಾವುದೇ ಸಿಬ್ಬಂದಿ ಅಥವಾ ಮತಗಟ್ಟೆ ಅಧಿಕಾರಿಗಳು ಸಭೆಗೆ ಬಾರದೇ ಗೈರು ಹಾಜರಾದ ಪಕ್ಷದಲ್ಲಿ ಅಂತಹವರ ಮೇಲೆ ಚುನಾವಣಾ ಆಯೋಗದ ನಿಯಮದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.