22.1 C
Sidlaghatta
Sunday, October 26, 2025

ಮನವಿ ಸಲ್ಲಿಸಿದ ಮಾನವ ಹಕ್ಕುಗಳ ಜನ ಜಾಗೃತಿ ಸಮಿತಿಯ ಕಾರ್ಯಕರ್ತರು

- Advertisement -
- Advertisement -

ರಾಜ್ಯದಲ್ಲಿ ಇತ್ತೀಚೆಗೆ ಶಾಲಾ ಬಾಲಕಿಯರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಿರುವ ಆರೋಪಿಗಳನ್ನು ಕಠಿಣವಾದ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮಾನವ ಹಕ್ಕುಗಳ ಜನ ಜಾಗೃತಿ ಸಮಿತಿಯ ಕಾರ್ಯಕರ್ತರು ಸೋಮವಾರ ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಮಾನವ ಹಕ್ಕುಗಳ ಜನ ಜಾಗೃತಿ ಸಮಿತಿಯ ಮಹಿಳಾ ಅಧ್ಯಕ್ಷೆ ಯಾಸ್ಮೀನ್‌ತಾಜ್ ಮಾತನಾಡಿ ಇತ್ತಿಚೆಗೆ ರಾಜ್ಯದಲ್ಲಿ ಸೇರಿದಂತೆ ದೇಶದಲ್ಲಿ ಆಗುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಮಟ್ಟಹಾಕಲು ಸರ್ಕಾರಗಳು ವಿಫಲವಾಗಿವೆ, ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ರಕ್ಷಣೆಗಾಗಿ ವಿಶೇಷವಾದ ಕಾಯಿದೆಯನ್ನು ರೂಪಿಸಿ, ಸುಭದ್ರವಾದ ರಾಷ್ಟ್ರನಿರ್ಮಾಣಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.
ತಾಲ್ಲೂಕು ಘಟಕದ ಪದಾಧಿಕಾರಿಗಳು ವೇಣುಗೋಪಾಲಸ್ವಾಮಿ ದೇವಾಲಯದಿಂದ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿಯ ಮುಂದೆ ಅತ್ಯಾಚಾರ ಪ್ರಕರಣಗಳ ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಹಶೀಲ್ದಾರರ ಮುಖಾಂತರ ಮನವಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದರು.
ಮಾನವ ಹಕ್ಕುಗಳ ಜನ ಜಾಗೃತಿ ಸಮಿತಿಯ ಅಧ್ಯಕ್ಷ ಎಚ್.ಶಂಕರ್, ಉಪಾಧ್ಯಕ್ಷ ಎಂ.ಮಂಜುನಾಥ್, ನಗರದ ಅಧ್ಯಕ್ಷ ಕೃಷ್ಣಮೂರ್ತಿ, ರಾಮಾಂಜಿನಪ್ಪ, ಕೆ.ಶ್ರೀನಾಥ್, ದೇವರಾಜು, ಎಲ್.ಮಧುಸೂದನ್, ವೆಂಕಟೇಶ್, ಜೆ.ಜೆ.ಹರೀಶ್, ಕಿಟ್ಟಿ, ಮುರಳಿ, ಅಣ್ಣಪ್ಪ, ಗೌಸ್, ಪ್ರಭಾಕರ್, ಮುನಿಕೃಷ್ಣ, ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!