ನಗರದ ಬಸ್ ನಿಲ್ದಾಣದ ಬಳಿಯಿರುವ ರೇಷ್ಮೆ ಬಿತ್ತನೆ ಕೋಠಿಯಲ್ಲಿ ಸೋಮವಾರ ಈಚೆಗೆ ನಿವೃತ್ತರಾದ ಮಾಜಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜರಾವ್ ಅವರನ್ನು ರೇಷ್ಮೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದರು.
ರೇಷ್ಮೆ ಇಲಾಖೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಪಶುವೈದ್ಯ ಇಲಾಖೆಯವರು, ಬ್ಯಾಂಕ್ ವ್ಯವಸ್ಥಾಪಕರು, ರೀಲರುಗಳ ಸಂಘದವರು, ರೈತರು, ತಾಲ್ಲೂಕು ಕಸಾಪ, ಅರ್ಚಕರು ಆಗಮಿಕರು ಮುಂತಾದವರು ಗುರುರಾಜ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ,‘ರೇಷ್ಮೆ ಬಿತ್ತನೆ ಕೋಠಿಯಲ್ಲಿ ಹೆಚ್ಚು ವರ್ಷಗಳ ಕಾಲ ಯಾರೂ ಕೆಲಸ ಮಾಡಲು ಇಷ್ಟಪಡುವುದಿಲ್ಲ. ಅದಕ್ಕೆ ಕಾರಣ ಒಂದು ಆಸ್ತಮಾ ಖಾಯಿಲೆಯಾದರೆ ಮತ್ತೊಂದು ಬೆಳಗಿನ ಜಾವ 3 ಗಂಟೆಗೇ ಬಂದು ಕಾರ್ಯನಿರ್ವಹಿಸಬೇಕಿರುವುದು. ಆದರೆ ಗುರುರಾಜರಾವ್ ಅವರು 27 ವರ್ಷಗಳ ಕಾಲ ಸತತವಾಗಿ ಈ ಇಲಾಖೆಯಲ್ಲಿ ದುಡಿದಿದ್ದಾರೆ. ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಕಾರ್ಯದರ್ಶೀಗಳಾಗಿದ್ದು, ತಾಲ್ಲೂಕಿನಾದ್ಯಂತ ದಾಖಲೆ ಪ್ರಮಾಣದಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಿದ್ದಾರೆ. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸತತ ಮೂರು ಬಾರಿ ಚುನಾಯಿತರಾಗಿದ್ದರು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲ್ಲೂಕಿನ ಜನಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಇವರು ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಇವರ ಅನುಭವ ಮತ್ತು ಮಾರ್ಗದರ್ಶನ ನಮಗೆ ಅತ್ಯಗತ್ಯವಾಗಿದೆ’ ಎಂದು ಹೇಳಿದರು.
ರೇಷ್ಮೆ ಇಲಾಖೆಯ ಉಪನಿರ್ದೇಶಕ ರತ್ನಯ್ಯಶೆಟ್ಟಿ, ಸಹಾಯಕ ನಿರ್ದೇಶಕ ಸುಧಾಕರ್, ರಾಜ್ಯಸಭಾ ಸದಸ್ಯ ಸುಬ್ಬಾರೆಡ್ಡಿ, ಕೇಂದ್ರ ರೇಷ್ಮೆ ಮಂಡಳಿಯ ಮಹೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀರಾಮಯ್ಯ, ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮುನಿನಾರಾಯಣರೆಡ್ಡಿ, ರೀಲರ್ ಸಂಘದ ಅಧ್ಯಕ್ಷ ಅಕ್ಮಲ್ ಪಾಷ, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ರಾಮ್ಕುಮಾರ್, ಎಸ್ಬಿಎಂ ವ್ಯವಸ್ಥಾಪಕಿ ಹೇಮಲತಾ, ದೇವರಾಯನದುರ್ಗದ ಪ್ರಧಾನ ಅರ್ಚಕ ಗೋಕುಲ್ ಭಟ್ಟರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -