ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿ ತಾಲ್ಲೂಕು ಸಮಿತಿ

- Advertisement -
- Advertisement -

ಮೌಡ್ಯ ಮತ್ತು ಅಭಿವೃದ್ದಿ ಹೆಸರಿನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದ್ದು, ಅದನ್ನು ತಡೆಯುವುದು ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿ ಉದ್ದೇಶ ಮಾನವ ಹಕ್ಕುಗಳ ಹಿತರಕ್ಷಣಾ ರಾಜ್ಯ ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ .ಜಿ. ಹೊಸ್ಕೋಟೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಶಿಡ್ಲಘಟ್ಟದಲ್ಲಿ ತಾಲ್ಲೂಕು ಸಮಿತಿಯನ್ನು ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ನಂತರ ಅವರು ಮಾತನಾಡಿದರು.
ಸಮಿತಿಯ ನಿಬಂಧನೆಗನುಗುಣವಾಗಿ, ಸಂಘಟನೆ, ಸಮಾಜಮುಖಿ ಕಾರ್ಯಗಳನ್ನು ನಡೆಸುವುದಾಗಿ ಹೇಳಿದರು.
ಶೋಷಣೆ, ಅವ್ಯವಹಾರ, ಬಡ ಕೂಲಿ ಕಾರ್ಮಿಕರು, ಮಹಿಳಾ ಸ್ವಾತಂತ್ರ್ಯ, ಮುಂತಾದ ಜನಪರ ಕಾಳಜಿಯುಕ್ತ ಹೋರಾಟಗಳು ನಮ್ಮದಾಗಲಿವೆ. ಹಲವೆಡೆ ಬಹುಕೋಟಿ ಹಗರಣಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಸಂಗಟನೆ ಯಶಸ್ವಿಯಾಗಿದೆ ಎಂದು ನುಡಿದರು.
ಗಂಗಾಧರಪ್ಪ(ತಾಲ್ಲೂಕು ಗೌರವಾಧ್ಯಕ್ಷ), ನರಸಿಂಹಮೂರ್ತಿ(ತಾಲ್ಲೂಕು ಅಧ್ಯಕ್ಷ), ಉಪಾಧ್ಯಕ್ಷರಾಗಿ ಸಿಎಚ್.ಆಂಜಿನಪ್ಪ, ಕೆ.ಎಂ.ನಾರಾಯಣಸ್ವಾಮಿ(ಪ್ರಧಾನ ಕಾರ್ಯದರ್ಶಿ), ಬಿ.ನರಸಿಂಹಪ್ಪ(ಖಜಾಂಚಿ), ಜಿ.ಎಂ.ಜನಾರ್ಧನ್(ಸಹ ಕಾರ್ಯದರ್ಶಿ), ಸಂಘಟನಾ ಕಾರ್ಯದರ್ಶಿಗಳಾಗಿ ಕೆ.ಎಸ್.ಗಿರೀಶ್ ನಾಯಕ್, ಅಂಬರೀಷ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾಗೇಂದ್ರಪ್ಪ, ಕೃಷ್ಣಮೂರ್ತಿ, ಅನ್ವರ್, ಯುವ ಸಮಿತಿ ಅಧ್ಯಕ್ಷರಾಗಿ ಸಿ.ಎನ್.ಪ್ರಶಾಂತ್ ಆಯ್ಕೆಯಾಗಿದ್ದಾರೆ.
ರಾಜ್ಯ ಸಮಿತಿ ಅಧ್ಯಕ್ಷ ಎಂ.ಹನುಮಯ್ಯ, ಖಜಾಂಚಿ ಮುನಿಕೃಷ್ಣಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!