ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಚಿಂತಾಮಣಿ ಮಾವು ಅಭಿವೃದ್ಧಿ ಕೇಂದ್ರ, ಬೋದಗೂರು ಸಿರಿ ಸಮೃದ್ಧಿ ರೈತಕೂಟ ಸಂಯುಕ್ತಾಶ್ರಯದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ತಾಲ್ಲೂಕಿನ ಹಿತ್ತಲಹಳ್ಳಿಯ ಎಚ್.ಜಿ.ಗೋಪಾಲಗೌಡರ ಮಾವಿನ ತೋಟದಲ್ಲಿ ಮಾವು ಸುಸ್ತಿರ ಕೃಷಿ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಲಾಲ್ ಬಾಗ್ ತೋಟಗಾರಿಕಾ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಡಾ.ಎಸ್.ವಿ.ಹಿತ್ತಲಮನಿ, ಸಸ್ಯರೋಗ ತಜ್ಞ ಡಾ.ದೇವರಾಜ್ ರೈತರಿಗೆ ತಾಂತ್ರಿಕ ಮಾಹಿತಿ ನೀಡಲಿದ್ದಾರೆ. ತಾಲ್ಲೂಕಿನ ಮಾವು ಬೆಳೆಗಾರರು ಭಾಗವಹಿಸಿ ಮಾಹಿತಿಯನ್ನು ಪಡೆಯುವಂತೆ ಮಾವು ಅಭಿವೃದ್ಧಿ ಕೇಂದ್ರದ ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.
- Advertisement -
- Advertisement -