ತಾಲ್ಲೂಕಿನ ಮುತ್ತೂರು ಗ್ರಾಮದ ಎಂ.ಎಸ್.ಮಂಜುನಾಥ್ ಮತ್ತು ಬಡುವನಹಳ್ಳಿಯ ಬಿ.ರೂಪಾ ಅವರಿಗೆ ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಕೃಷಿ ಮೇಳದಲ್ಲಿ ಯುವ ರೈತ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ತಾಲ್ಲೂಕಿನ ಮುತ್ತೂರು ಗ್ರಾಮದ ಎಂ.ಎಸ್.ಮಂಜುನಾಥ್ ಮತ್ತು ಬಡುವನಹಳ್ಳಿಯ ಬಿ.ರೂಪಾ ಅವರು ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಸಾವಯವ ಗೊಬ್ಬರ, ಅಜೋಲಾ, ರಸಸಾರ ತಯಾರಿಕೆ, ಗೋಬರ್ ಗ್ಯಾಸ್ ಬಳಕೆ, ಹಸು, ಕುರಿ, ಕೋಳಿ, ಜೇನು ಸಾಕಾಣಿಕೆ, ತರಕಾರಿ, ಹಿಪ್ಪುನೇರಳೆ, ತೋಟಗಾರಿಕಾ ಬೆಳೆಗಳು, ನೀರಿನ ಸದ್ಭಳಕೆ ಮುಂತಾದ ಪದ್ಧತಿಗಳನ್ನು ಪರಿಗಣನೆಗೆ ತೆಗೆದುಕೊಂಡು ತಾಲ್ಲೂಕು ಯುವ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿರುವುದಾಗಿ ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -