23.1 C
Sidlaghatta
Wednesday, October 29, 2025

ಮೇಲೂರು ಗ್ರಾಮದಲ್ಲಿ 26 ನೇ ವರ್ಷದ ಧರ್ಮರಾಯಸ್ವಾಮಿ ದ್ರೌಪದಮ್ಮ ಹೂವಿನ ಕರಗ ಮಹೋತ್ಸವ

- Advertisement -
- Advertisement -

ತಾಲ್ಲೂಕಿನ ಮೇಲೂರು ಗ್ರಾಮದ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗವನ್ನು ಬುಧವಾರ ರಾತ್ರಿ ವಿಜೃಂಭಣೆಯಿಂದ ಆಚರಿಸಿದರು.
ಗ್ರಾಮದಲ್ಲಿ ನಡೆಯುತ್ತಿರುವ 26 ನೇ ವರ್ಷದ ಹೂವಿನ ಕರಗ ಮಹೋತ್ಸವದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದರು. ಮನೆಗಳ ಮುಂದೆ ರಂಗವಲ್ಲಿಯನ್ನು ಹಾಕಿ ಕರಗಕ್ಕೆ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿದರು. ವಹ್ನೀಕುಲ ಕ್ಷತ್ರಿಯರ ಟ್ರಸ್ಟ್‌ ವತಿಯಿಂದ ಆಯೋಜಿಸಲಾಗಿದ್ದ ಕರಗ ಮಹೋತ್ಸವಕ್ಕೆಂದು ಧರ್ಮರಾಯಸ್ವಾಮಿ ದ್ರೌಪದಮ್ಮನವರ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರವನ್ನು ಮಾಡಿದ್ದರು. ಪ್ರಮುಖ ಬೀದಿಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.
ಕರಗವನ್ನು ಧರ್ಮೇಂದ್ರ ಅವರು ಹೊತ್ತಿದ್ದು, ಗ್ರಾಮದ ಎಲ್ಲಾ ಬೀದಿಗಳಲ್ಲೂ ಮೆರವಣಿಗೆಯಲ್ಲಿ ತೆರಳಿ ಪ್ರತಿ ಮನೆಯ ಬಳಿಯೂ ಪೂಜೆಯನ್ನು ಸ್ವೀಕರಿಸಿದರು. ಕರಗದೊಂದಿಗೆ ತಮಟೆ, ನಾದಸ್ವರ ಸೇರಿದ ವಾದ್ಯಗೋಷ್ಠಿ, ವೀರಕುಮಾರರು ಮೆರವಣಿಗೆಯಲ್ಲಿ ಸಾಗಿದರು.
Now sidlaghatta.com is on WhatsApp, text ‘HI’ to +91 9986904424

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!