ಮೇಲೂರು ಜೇಸಿಸ್ ವಿಧ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

- Advertisement -
- Advertisement -

ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವೆ ಕುಳಿತು ಕೇವಲ ಪಾಠ, ಪ್ರವಚನಕ್ಕಷ್ಟೇ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಎಂದು ಚಲನಚಿತ್ರ ನಟ ಶಂಕರ್‍ ಅಶ್ವಥ್ ಹೇಳಿದರು.
ತಾಲೂಕಿನ ಮೇಲೂರು ಗ್ರಾಮದ ಜೇಸಿಸ್ ವಿಧ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ವಿಚಾರಗಳನ್ನು ಅರ್ಥಮಾಡಿಕೊಳ್ಳುವಂತಹ ಹಂಬಲ ಹೊಂದಿರಬೇಕು ಎಂದರು.
ಪೋಷಕರೂ ಕೂಡಾ ತಮ್ಮ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಷ್ಟೆ ಸೀಮಿತಗೊಳಿಸದೇ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು.
ಮಕ್ಕಳನ್ನು ಸದಾ ಕ್ರಿಯಾಶೀಲವಾಗಿರುವಂತೆ ಮಾಡಲು ಶಿಕ್ಷಣ ಸಂಸ್ಥೆಗಳು ಕ್ರೀಡಾ ಚಟುವಟಿಕೆಗಳನ್ನು ಆಯೋಜನೆ ಮಾಡುವ ಮೂಲಕ ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗಾಗಿ ಹೆಚ್ಚಿನ ಪರಿಶ್ರಮ ಹಾಕಬೇಕು.
ವಿದ್ಯಾರ್ಥಿಗಳು ಕೇವಲ ಓದುವುದು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿ ನಂತರ ಒಂದು ಉದ್ಯೋಗ ಪಡೆಯುವುದಷ್ಟೇ ಜೀವನದ ಗುರಿ ಎಂದು ಭಾವಿಸದೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಗಮನಹರಸುವುದರೊಂದಿಗೆ ಸಾಮಾಜಿಕ ಕಳಕಳಿಯ ಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಇದೇ ಸಂಧರ್ಭದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.
ಸಂಸ್ಥೆಯ ಅಧ್ಯಕ್ಷ ರವಿಚಂದ್ರ, ಕಾರ್ಯದರ್ಶಿ ಪ್ರಶಾಂತ್‍ಕುಮಾರ್ ಸೇರಿದಂತೆ ಶಾಲಾ ಆಡಳಿತ ಮಂಡಳಿಯ ಸದಸ್ಯರುಗಳು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!