23.1 C
Sidlaghatta
Tuesday, October 28, 2025

ಯುವ ಸಂಘಟನೆಗಳಿಂದ ಗ್ರಾಮೀಣ ಅಭಿವೃದ್ಧಿ ಸಾಧ್ಯ

- Advertisement -
- Advertisement -

ಯುವ ಸಂಘಟನೆಗಳು ಗ್ರಾಮೀಣ ಪ್ರದೇಶದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಯೊಂದಿಗೆ ನೈರ್ಮಲ್ಯೀಕರಣದತ್ತ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ಶುಕ್ರವಾರ ಒಕ್ಕಲಿಗರ ಯುವಸೇನೆ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತರಿಗೆ ಪ್ರೋತ್ಸಾಹಿಸುವುದು, ವಿದ್ಯಾಭ್ಯಾಸಕ್ಕೆ ನೆರವಾಗುವುದು, ಆರೋಗ್ಯ, ಸ್ವಚ್ಛತೆಯ ಕುರಿತಂತೆ ಅರಿವು ಮೂಡಿಸುವುದು, ಗಿಡಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ಯುವಕರು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬಹುದಾದ ಸಂಘಟನೆಗಳು ಇದ್ದಾಗ ಮಾತ್ರ ಅಭಿವೃದ್ಧಿಯ ಕನಸು ನನಸಾಗಲು ಸಾಧ್ಯ. ಯುವ ಸಮೂಹ ಅಭಿವೃದ್ಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ದುಶ್ಚಟದಿಂದ ದೂರ ಇರಬೇಕು. ಗ್ರಾಮೀಣ ಪ್ರದೇಶದಲ್ಲಿ ಶಾಂತಿ ಮತ್ತು ಭಾವೈಕ್ಯತೆ ನೆಲೆಸಲು ಯುವ ಸಂಘಟನೆ ಕಾರ್ಯಗಳು ಮುಂದಾಗಬೇಕೆಂದರು.
ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಬಿ.ಎಂ.ಮುನಿಕೃಷ್ಣಪ್ಪ, ಶ್ರೀನಿವಾಸ ನಾಗಪ್ಪ, ಒಕ್ಕಲಿಗರ ಯುವಸೇನೆ ಸಂಘದ ತಾಲ್ಲೂಕು ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ನಗರ ಅಧ್ಯಕ್ಷ ಆರ್.ಪುರುಷೋತ್ತಮ್, ಮಂಜುನಾಥ್, ಪ್ರಸನ್ನ, ಸಿ.ವಿ.ಮುನಿರಾಜು, ತ್ಯಾಗರಾಜು, ನಾಗೇಶ, ಲಕ್ಷ್ಮೀಪತಿ, ಪ್ರಭಾಕರ್, ಬಿ.ಕೆ.ಗೋವಿಂದರಾಜು, ವೆಂಕಟಪ್ಪ, ತಿಮ್ಮರಾಯಣ್ಣ, ಎಚ್.ಆರ್.ಗಂಗಾಧರ, ಡಿ.ಸಂತೋಷ, ಪಿ.ಚಂದ್ರ, ಕೆ.ನಾರಾಯಣಸ್ವಾಮಿ, ಎ.ಸತೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!