Home News ರಕ್ತದಾನ ಶಿಬಿರ

ರಕ್ತದಾನ ಶಿಬಿರ

0

ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾವು ನಮ್ಮ ಅಭಿಮಾನಿಸುವ ನಟರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಮೆಗಾಸ್ಟಾರ್ ಚಿರಂಜೀವಿ ಫ್ಯಾನ್ಸ್ ಅಸೋಸಿಯೇಷನ್ ತಾಲ್ಲೂಕು ಅಧ್ಯಕ್ಷ ದಿನೇಶ್ ಬಾಬು ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಮೆಗಾ ಪವರ್ ಸ್ಟಾರ್ ರಾಮ್ಚರಣ್ ತೇಜಾ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ರಕ್ತದಾನ ಶಿಬಿರದ ಜೊತೆಯಲ್ಲಿ ಆಸ್ಪತ್ರೆಯಲ್ಲಿರುವ ಹೊರರೋಗಿಗಳಿಗೆ ಬ್ರೆಡ್, ಹಣ್ಣು, ಹಣ್ಣಿನ ರಸವನ್ನು ವಿತರಿಸಲಾಗುತ್ತಿದೆ. ಅಭಿಮಾನಿಗಳು ಮತ್ತು ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ನಮ್ಮ ಉದ್ದೇಶಕ್ಕೆ ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.
ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಮೂರ್ತಿ ಮಾತನಾಡಿ, ಜನರಿಗೆ ಉಪಯುಕ್ತ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು. ಈ ರೀತಿಯ ರಕ್ತದಾನ ಶಿಬಿರಗಳು ಅತ್ಯಗತ್ಯ ಮತ್ತು ಉಪಯುಕ್ತ ಎಂದು ಹೇಳಿದರು.
ಉಪನ್ಯಾಸಕ ವೆಂಕಟೇಶ್, ರಾಜಸ್ವ ನಿರೀಕ್ಷಕ ಸುಬ್ರಮಣಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ಬಾಲಕೃಷ್ಣ, ಮೆಗಾಸ್ಟಾರ್ ಚಿರಂಜೀವಿ ಫ್ಯಾನ್ಸ್ ಅಸೋಸಿಯೇಷನ್ ಸದಸ್ಯರಾದ ದೇವರಾಜು, ರವಿಚಂದ್ರ, ಮಧುಕುಮಾರ್, ಬಿ.ಮಂಜುನಾಥ, ಶ್ರೀನಿವಾಸ್, ರಾಧಾಕೃಷ್ಣ, ರಾಮ್, ಮುನಿರಾಜು, ರಾಮಮೂರ್ತಿ, ಇಸ್ಮಾಯಿಲ್, ಅಸದ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.