ಶಿಡ್ಲಘಟ್ಟ ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿ ಎರಡು ವರ್ಷಗಳು ಕಳೆದರು ನಗರದ ಚಿತ್ರಣ ಮಾತ್ರ ಬದಲಾಗಿಲ್ಲವೆಂದು ನಾಗರಿಕರು ಆರೋಪಿಸಿದ್ದಾರೆ.
ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿಗಳು, ಚರಂಡಿಗಳಲ್ಲಿ ತುಂಬಿರುವ ಕೊಳಚೆ ನೀರು, ರಸ್ತೆಗಳಲ್ಲಿ ಬಿದ್ದಿರುವ ಹಳ್ಳಿಗಳಿಂದ ನಾಗರಿಕರು ನರಕಯಾತನೆ ಅನುಭವಿಸುವಂತಾಗಿದೆ.
ನಗರಸಭೆಗೆ ಪ್ರತಿ ವರ್ಷ ಕೋಟ್ಯಾಂತರ ರೂಪಾಯಿಗಳ ಅನುದಾನಗಳು ಬರುತ್ತಿದ್ದರು, ರಸ್ತೆಗಳನ್ನು ದುರಸ್ಥಿ ಮಾಡಿಲ್ಲ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳಂತೂ ರಸ್ತೆಗಳ ಬಗ್ಗೆ ಗಮನಹರಿಸುತ್ತಿಲ್ಲ, ಶಿಡ್ಲಘಟ್ಟದ ಬೈಪಾಸ್ ರಸ್ತೆಯ ಮೂಲಕ ಚಿಕ್ಕಬಳ್ಳಾಪುರ, ದಿಬ್ಬೂರಹಳ್ಳಿಯ ಕಡೆಗೆ ಸಂಚಾರ ಮಾಡುವ ರಸ್ತೆಯ ನಡುವೆ ಬಿದ್ದಿರುವ ಹಳ್ಳಗಳನ್ನು ಗುರ್ತಿಸಲಾಗದೆ, ವಾಹನ ಸವಾರರು ಬಿದ್ದು ಗಾಯಗೊಂಡು ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದರೆ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳ ಕಡೆಗೆ ಕೈ ತೋರಿಸುತ್ತಾರೆ.
ನಗರದಲ್ಲಿ ಇತ್ತಿಚೆಗೆ ಮಳೆ ಬೀಳುತ್ತಿರುವುದರಿಂದ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿಗಳು ಕೊಳೆಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಬೀತಿಯಲ್ಲಿ ಜನರು ಕಂಗಾಲಾಗುತ್ತಿದ್ದಾರೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯ ನಾಗರಿಕರಾದ ಚಂದ್ರಮೋಹನ್, ಅಶೋಕ್ ಕುಮಾರ್, ನಾರಾಯಣಸ್ವಾಮಿ, ಮುನಿಯಪ್ಪ, ಮುಂತಾದವರು ಒತ್ತಾಯಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







