24.1 C
Sidlaghatta
Saturday, December 27, 2025

ರಸ್ತೆ ಡಾಂಬರೀಕರಣಕ್ಕೆ ಚಾಲನೆ

- Advertisement -
- Advertisement -

ತಾಲ್ಲೂಕಿನ ಗಡಿ ಭಾಗದಲ್ಲಿ ರಸ್ತೆಗಳು ಹದಗೆಟ್ಟಿರುವ ಕಾರಣ ರಸ್ತೆ ಡಾಂಬರೀಕರಣ ಮಾಡುವ ಮೂಲಕ ಉತ್ತಮ ರಸ್ತೆ ನಿರ್ಮಾಣ ಕಾರ್ಯ ನಡೆಸುತ್ತಿರುವುದಾಗಿ ಶಾಸಕ ಎಂ.ರಾಜಣ್ಣ ತಿಳಿಸಿದರು.
ಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತೂರು ಗ್ರಾಮದ ಡೈರಿ ಸ್ಥಳದಿಂದ ತಾಲ್ಲೂಕಿನ ಗಡಿಭಾಗದವರೆಗೂ ಲೋಕೋಪಯೋಗಿ ಇಲಾಖೆಯಿಂದ 40 ಲಕ್ಷ ರೂಪಾಯಿ ವೆಚ್ಚದಲ್ಲಿ 1.8 ಕಿ.ಮೀ ಡಾಂಬರೀಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎರಡು ಹಂತಗಳಲ್ಲಿ ಈ ಕಾಮಗಾರಿ ನಡೆಸುತ್ತಿದ್ದು, 50 ಮಿಮೀ ಮತ್ತು 25 ಮಿಮೀ ಪದರಗಳಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ. ಈ ಭಾಗದ ಮುಖಂಡರ ಹಾಗೂ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಸರ್ಕಾರದ ವಿಶೇಷ ಅನುದಾನದಲ್ಲಿ ಚಾಲನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಕಾಮಗಾರಿಯ ಗುಣಮಟ್ಟದಲ್ಲಿ ರಾಜೀಯಾಗದೇ ಕಾಮಗಾರಿಯ ಗುಣಮಟ್ಟದ ಬಗ್ಗೆ ಎಚ್ಚರ ವಹಿಸಿ ಎಂದರು.
ಹಾಪ್ಕಾಮ್ಸ್ ಅಧ್ಯಕ್ಷ ಮುತ್ತೂರು ಚಂದ್ರೇಗೌಡ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಶಿವಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್, ರವಿ, ಗಂಗಾಧರ್, ಮಂಜುನಾಥ್, ಎಂ.ಆರ್.ರವಿಕುಮಾರ್, ವಿಜಯಕುಮಾರ್, ನಾಗರಾಜು, ವಿಶ್ವನಾಥ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!