ನಗರದ ಶ್ರೀ ಸರಸ್ವತಿ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ವಿ. ಸೀತಾಲಕ್ಷ್ಮಿ ಅವರಿಗೆ ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಅವರು ಸೀನಿಯರ್ ಗೈಡರ್ ಪ್ರಶಸ್ತಿ ನೀಡಿ ಪುರಸ್ಕರಿಸಿದರು.
ವಿ. ಸೀತಾಲಕ್ಷ್ಮಿ ಅವರು ೧೯೭೭ರಲ್ಲಿ ಕೆ. ಜಿ. ಎಫ್. ನ ಸೇಂಟ್ ಜೋಸೆಫ್ಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಗೈಡ್ಸ್ ಘಟಕವನ್ನು ಪ್ರಾರಂಭಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಕ್ಕಳಿಗೆ ತರಬೇತಿ ನೀಡಿ ಅವರೊಂದಿಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದರು. ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪುರಸ್ಕಾರಕ್ಕೆ ಭಾಜನರಾದ ಏಕೈಕ ಮಹಿಳೆ ಇವರಾಗಿದ್ದಾರೆ.
- Advertisement -
- Advertisement -
- Advertisement -







