ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ತಾಲ್ಲೂಕಿನ ಕ್ರೀಡಾಪಟುವಿಗೆ ಚಿನ್ನದ ಪದಕ

- Advertisement -
- Advertisement -

ತಾಲ್ಲೂಕಿನ ಜಯಂತಿ ಗ್ರಾಮದ ಕ್ರೀಡಾಪಟು ನಾರಾಯಣಸ್ವಾಮಿ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಮೂರು ವಿಭಾಗಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸಿದ್ದಾರೆ.
ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ 10 ಸಾವಿರ ಮೀಟರ್ ಓಟದಲ್ಲಿ ಚಿನ್ನ, 5000 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು 1500 ಮೀಟರ್ ಓಟದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.
‘ರೈತನಾಗಿದ್ದರೂ ಕ್ರೀಡೆಯಲ್ಲಿ ನನಗಿರುವ ಆಸಕ್ತಿಯನ್ನು ಗುರುತಿಸಿ ಅಂತಾರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ತರಬೇತಿ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವ ಗುರಿಯನ್ನು ಹೊಂದಿದ್ದೇನೆ’ ಎಂದು ಜಯಂತಿ ಗ್ರಾಮದ ಕ್ರೀಡಾಪಟು ನಾರಾಯಣಸ್ವಾಮಿ ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!