ಪಾಠದ ಜೊತೆಗೆ ಪಾಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿದಾಗ ಮಕ್ಕಳ ಭವಿಷ್ಯ ಹಾಗೂ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪಿಸಲು ಸಹಕಾರಿಯಾಗುತ್ತದೆ ಎಂದು ಡಾಲ್ಫಿನ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎ.ನಾಗರಾಜ್ ಅಭಿಪ್ರಾಯಪಟ್ಟರು.
ಅಖಿಲ ಭಾರತ ಗಣಿತ ಶಿಕ್ಷಕರ ಸಂಘದಿಂದ ಈಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಗಣಿತ ಒಲಂಪಿಯಾಡ್ ಸ್ಫರ್ಧೆಯಲ್ಲಿ ವಿಜೇತರಾದ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಅವರು ಮಾತನಾಡಿದರು.
ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯ, ೨ನೆ ತರಗತಿಯ ಕೀರ್ತನಾಳಿಗೆ ಬೆಸ್ಟ್ ಮ್ಯಾಥಮೆಟಿಕ್ ಸ್ಟೂಡೆಂಟ್ ಅವಾರ್ಡ್ ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಬಂಗಾರದ ಪದಕಗಳನ್ನು ಪಡೆದಿದ್ದು ಎಲ್ಲರನ್ನೂ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಅಭಿನಂದಿಸಲಾಯಿತು.
ರಾಷ್ಟ್ರಮಟ್ಟದಲ್ಲಿ ಕೇಂದ್ರೀಯ ಶಿಕ್ಷಣ ಪಠ್ಯದ ವಿದ್ಯಾರ್ಥಿಗಳಿಗೆ ಮಾತ್ರವೇ ನಡೆಸಿದ ಗಣಿತ ಸ್ಫರ್ಧೆಯಲ್ಲಿ ಡಾಲ್ಫಿನ್ ಶಾಲೆಯ ೬೦ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ ೨ನೇ ತರಗತಿಯ ಕೀರ್ತನಾಳು ೧೦೦ಕ್ಕೆ ನೂರು ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಗಣಿತ ವಿದ್ಯಾರ್ಥಿ ಎಂಬ ಬಿರುದಿಗೆ ಪಾತ್ರಳಾಗಿದ್ದು ನೆನಪಿನ ಕಾಣಿಕೆ, ಪ್ರಮಾಣ ಪತ್ರ ಹಾಗೂ ಬಂಗಾರದ ಪದಕ ನೀಡಿ ಗೌರವಿಸಲಾಯಿತು.
ಶಾಲೆಯ ೯ ವಿದ್ಯಾರ್ಥಿಗಳು ೯೦ ಅಂಕಗಳನ್ನು ಪಡೆದಿದ್ದು ಬಂಗಾರದ ಪದಕಗಳನ್ನು ಪಡೆದಿದ್ದಾರೆ. ಕೀರ್ತನಾ ಸೇರಿದಂತೆ ಬಹುಮಾನ ಪಡೆದ ಅನಿರುದ್, ತರುಣ್, ಮೊಹಮದ್, ದರ್ಶನ್, ಜಯಂತ್, ವೀಕ್ಷಿತ, ರಿಫತ್ ಬೇಗಂ, ಅನೀಷ್ರವರನ್ನು ಶಾಲೆಯಲ್ಲಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ಶಾಲೆಯ ಆಡಳಿತ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಪ್ರಾಂಶುಪಾಲ ಥಾಮಸ್ ಫಿಲಿಪ್ಸ್ ಸೇರಿದಂತೆ ಬಹುಮಾನ ಪಡೆದ ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -