22.2 C
Sidlaghatta
Sunday, August 3, 2025

ರೈತನ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡಿರುವುದನ್ನು ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ದೇಶದ ಬೆನ್ನೆಲುಬಾದ ರೈತನ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಶುಕ್ರವಾರ ತಾಲ್ಲೂಕು ಕಚೇರಿಯ ಮುಂದೆ ರೈತರು ಪ್ರತಿಭಟಿಸಿದರು.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಷ ಕುಡಿದು ಸತ್ತ ರೈತ ವಿಠಲ ಅರಬಾವಿ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ಮತ್ತು ಆತನ ಮಗನಿಗೆ ಉದ್ಯೋಗ ಕೊಡುತ್ತೇನೆಂದು ಹೇಳಿದ್ದವರು, ಈಗ ರೈತ ಮದ್ಯ ಸೇವಿಸಿ ಸತ್ತ ಎಂದು ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿದ್ದು, ರೈತರ ಬಗ್ಗೆ ಕೀಳಾಗಿ ಮಾತನಾಡಿರುವ ರಾಜ್ಯದ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತರು ತಿಳಿಸಿ, ಶಿರಸ್ತೆದಾರರಿಗೆ ಮನವಿಯನ್ನು ಸಲ್ಲಿಸಿದರು.
ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮಳ್ಳೂರು ಹರೀಶ್‌, ಅಪ್ಪೇಗೌಡನಹಳ್ಳಿ ತ್ಯಾಗರಾಜ್‌, ಲೋಕೇಶ್‌, ಅಂಬರೀಷ್‌, ದೇವರಾಜ್‌, ವೇಣು, ಕೃಷ್ಣಪ್ಪ, ರಾಮಚಂದ್ರ, ಜಿ.ಎಂ.ವೆಂಕಟರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!